Advertisement

Sagara ;ಮಾರಣಾಂತಿಕ ಹಲ್ಲೆ: ದೂರು ದಾಖಲು

09:01 PM Jan 29, 2024 | Team Udayavani |

ಸಾಗರ: ತಾಲೂಕಿನ ಬರೂರು ಗ್ರಾಪಂ ವ್ಯಾಪ್ತಿಯ ಲ್ಯಾವಿಗೆರೆ ವಾಸಿ ಮನುಕುಮಾರ್‌ ಎಂಬುವವರ ಮೇಲೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಭಾನುವಾರ ಸಂಜೆ ನಡೆದಿದೆ.

Advertisement

ಘಟನೆಗೆ ಸಂಬಂಧಪಟ್ಟಂತೆ ತಾಪಂ ಮಾಜಿ ಸದಸ್ಯೆ ಸೇರಿದಂತೆ ನಾಲ್ವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ. ತಾಪಂ ಮಾಜಿ ಅಧ್ಯಕ್ಷ ಪ್ರಕಾಶ್‌ ಲ್ಯಾವಿಗೆರೆ ಪುತ್ರರಾಗಿರುವ ಮನುಕುಮಾರ್‌ ಭಾನುವಾರ ತೋಟಕ್ಕೆ ಹೋಗಿದ್ದ ಸಂದರ್ಭದಲ್ಲಿ ಏಕಾಏಕಿ ನಾಲ್ವರು ದೊಣ್ಣೆ, ಕೇಬಲ್‌, ಪೈಪ್‌ ಗಳಿಂದ ಹಲ್ಲೆ ನಡೆಸಿದ್ದಾರೆ.

ತಮ್ಮ ಮೇಲಿನ ಹಲ್ಲೆಗೆ ಸಂಬಂಧಪಟ್ಟಂತೆ ಮನುಕುಮಾರ್‌ ತಾಪಂ ಮಾಜಿ ಸದಸ್ಯೆ ಪ್ರಭಾವತಿ, ಚಂದ್ರಕಾಂತ್‌, ಪರಶುಮಾರ್‌ ಮತ್ತು ಪ್ರಮೀಳಾ ಅವರ ವಿರುದ್ಧ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next