Advertisement

ಅತ್ತೆ ಸಾವಿನ ಸುದ್ದಿ ತಂದ ಆಘಾತ; ಹೃದಯಾಘಾತಕ್ಕೀಡಾಗಿ ಅಳಿಯ ಸಾವು

11:37 AM Nov 21, 2022 | sudhir |

ಸಾಗರ: ಅತ್ತೆಯ ಸಾವಿನ ಸುದ್ದಿ ಕೇಳಿ ಆಘಾತಗೊಂಡ ಅಳಿಯ ತೀವ್ರ ಹೃದಯಾಘಾತಕ್ಕೀಡಾಗಿ ಮೃತಪಟ್ಟ ಘಟನೆ ತಾಲೂಕಿನ ಲಿಂಗನಮಕ್ಕಿಯಲ್ಲಿ ಭಾನುವಾರ ನಡೆದಿದೆ.

Advertisement

ಸಹೋದರತ್ತೆ ಲಕ್ಷಮ್ಮ(58) ಎಂಬುವವರನ್ನು ಅಳಿಯ ಗುಲ್ಫತ್ ಸಿಂಗ್(45) ಲಿಂಗನಮಕ್ಕಿಯಿಂದ ಬೆಂಗಳೂರಿಗೆ ಹೊರಡುವ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಬೆಂಗಳೂರಿಗೆ ಕಳಿಸಿಕೊಟ್ಟಿದ್ದರು. ಈ ಬಸ್ಸು ಆನಂದಪುರ ಸಮೀಪ ಹೋಗುತ್ತಿದ್ದಾಗ ಅತ್ತೆ ಲಕ್ಷ್ಮಮ್ಮನಿಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ. ಬಸ್ಸಿನಲ್ಲಿದ್ದ ನಿರ್ವಾಹಕ ಲಕ್ಷ್ಮಮ್ಮ ಸಂಬಂಧಿಕರಿಗೆ ಕರೆ ಮಾಡಿ ಮೃತಪಟ್ಟ ಸುದ್ದಿ ತಿಳಿಸಿದ್ದಾರೆ.

ಈ ಸುದ್ದಿ ತಿಳಿಯುತ್ತಿದ್ದಂತೆ ಶಾಕ್ ಆದ ಗುಲ್ಫತ್ ಸಿಂಗ್ ಲಿಂಗನಮಕ್ಕಿಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಾಗ ಅವರಿಗೂ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರು: ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ಮಧ್ಯೆ ಗಲಾಟೆ, ಕೊಲೆಯಲ್ಲಿ ಅಂತ್ಯ

Advertisement

Udayavani is now on Telegram. Click here to join our channel and stay updated with the latest news.

Next