Advertisement

ಇಂದಿನಿಂದ ಪಾನಿಪುರಿ ಮಾರಾಟ ಬಂದ್‌

12:33 PM Jul 05, 2020 | Naveen |

ಸಾಗರ: ಕೋವಿಡ್ ಹಿನ್ನೆಲೆಯಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಜು. 5ರ ಭಾನುವಾರದಿಂದ ನಗರದಲ್ಲಿ 10 ದಿನಗಳ ಕಾಲ ಪಾನಿಪುರಿ ಮಸಾಲಾಪುರಿ ಮತ್ತು ಗೋಬಿ ಮಂಚೂರಿ ಮಾರಾಟ ಮಾಡದಿರಲು ಶುಕ್ರವಾರ ಪಾನಿಪುರಿ ಮತ್ತು ಗೋಬಿ ಮಂಚೂರಿ ಮಾರಾಟಗಾರರ ಸಂಘದಿಂದ ನಿರ್ಣಯ ಕೈಗೊಳ್ಳಲಾಗಿದೆ.

Advertisement

ಇಲ್ಲಿನ ನಗರಸಭೆ ರಂಗಮಂದಿರದಲ್ಲಿ ಕರೆಯಲಾಗಿದ್ದ ಸಭೆಯಲ್ಲಿ ಈ ಸ್ವಯಂ ನಿರ್ಣಯ ಕೈಗೊಳ್ಳಲಾಗಿದ್ದು, ಸಂಘವು ಮುಂದಿನ ಆದೇಶ ನೀಡುವವರೆಗೂ ಸಂಘದ ನೊಂದಾಯಿತ ಸದಸ್ಯರು ಬೀದಿಬದಿ ಮತ್ತು ಅಧಿಕೃತ ಅಂಗಡಿಗಳಲ್ಲಿ ವ್ಯಾಪಾರ ನಡೆಸುವಂತಿಲ್ಲ ಎಂದು ನಿರ್ಣಯಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಾನಿಪುರಿ ಮಂಜುನಾಥ್‌, ಕೇಂದ್ರ ಮತ್ತು ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣಕ್ಕಾಗಿ ಇನ್ನಿಲ್ಲದ ಪ್ರಯತ್ನ ನಡೆಸುತ್ತಿದೆ. ಇಂತಹ ಸಂದರ್ಭದಲ್ಲಿ ಸರ್ಕಾರ ಮತ್ತು ಸ್ಥಳೀಯ ಆಡಳಿತದ ಜೊತೆ ಸಹಕಾರ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ನಮ್ಮ ಸಂಘದಲ್ಲಿ 60 ಜನ ಸದಸ್ಯರಿದ್ದು, ಈ ವ್ಯಾಪಾರದಿಂದ ಜೀವನ ನಡೆಯಬೇಕಾಗಿದೆ. ಆದರೂ ನಮ್ಮ ಜೀವನಕ್ಕಿಂತ ಸಾರ್ವಜನಿಕರ ಆರೋಗ್ಯ ನಮಗೆ ಮುಖ್ಯ. ಈ ಹಿನ್ನೆಲೆಯಲ್ಲಿ ವ್ಯಾಪಾರವನ್ನು ಭಾನುವಾರದಿಂದ ಸಂಪೂರ್ಣವಾಗಿ ನಿಲ್ಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷ ಡಿ.ತುಕಾರಾಮ್‌, ಪ್ರಮುಖರಾದ ಸುಭಾಷ್‌ ಕೌತಳ್ಳಿ, ಶರತ್‌, ಗಜೇಂದ್ರ, ರೂಪಾ, ಸುಬ್ಬಣ್ಣ ಇನ್ನಿತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next