Advertisement

Sagara: ಶಾಸಕ ಬೇಳೂರು ತೇಜೋವಧೆ; ಪೊಲೀಸರಿಗೆ ದೂರು

09:22 PM May 23, 2024 | Vishnudas Patil |

ಸಾಗರ: ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ, ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣರ ವಿರುದ್ಧ ಸಾಮಾಜಿಕ ಜಾಲ ತಾಣದಲ್ಲಿ ತೇಜೋವಧೆ ಮಾಡಿರುವ ಆರೋಪಿಯ ವಿರುದ್ಧ ಕಾನೂನು ಕ್ರಮಕ್ಕೆ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸಿ.ಎಂ. ಚಿನ್ಮಯ್ ಗುರುವಾರ ಸಾಗರ ಪೇಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Advertisement

ಶಾಸಕ ಬೇಳೂರು ಇತ್ತೀಚೆಗೆ ನಗರದ ಶಿವಮೊಗ್ಗ ರಸ್ತೆಯಲ್ಲಿರುವ ಪ್ರಥಮ ದರ್ಜೆ ಕಾಲೇಜು ಮುಂಭಾಗದ ಅಂಗಡಿಯಲ್ಲಿ ಗುಟ್ಕಾ, ಸಿಗರೇಟು ಮೊದಲಾದ ತಂಬಾಕು ಉತ್ಪನ್ನಗಳ ಮಾರಾಟ ಮಾಡುತ್ತಿದ್ದ ಅಂಗಡಿ ಮಾಲೀಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡಿತ್ತು. ಅದೇ ವಿಡಿಯೋವನ್ನು ದುರುಪಯೋಗಪಡಿಸಿಕೊಳ್ಳಲಾಗಿದೆ. ಅಪರಿಚಿತನೊಬ್ಬ ಬೇಳೂರು ವಿರುದ್ಧ ಇನ್‌ಸ್ಟಾ ಗ್ರಾಂನಲ್ಲಿ ಆಪಪ್ರಚಾರ ಮಾಡುವ ಉದ್ದೇಶದಿಂದ ‘ಖದೀಮ ಕಾಂಗ್ರೆಸ್’ ಎಂಬ ಖಾತೆಯಿಂದ ವೀಡಿಯೋ ಒಂದನ್ನು ಹರಿಬಿಟ್ಟಿದ್ದಾನೆ. ಆರೋಪಿಯ ಈ ಕೃತ್ಯವು ಕಾನೂನುಬಾಹಿರವಾಗಿದ್ದು ಗೌರವಾನ್ವಿತ ಶಾಸಕರ ತೋಜೋವಧೆ ಮಾಡಿದ ಆರೋಪಿಯನ್ನು ಪತ್ತೆ ಹಚ್ಚಿ ಕಾನೂನಿನ ಕಠಿನ ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ಮನವಿ ಮಾಡಿಕೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next