Advertisement

ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲ: ನೂತನ ಧ್ವಜಸ್ತಂಭ ಶೋಭಾಯಾತ್ರೆ

12:31 AM Mar 30, 2023 | Team Udayavani |

ಉಡುಪಿ: ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇಗುಲದ ನೂತನ ಧ್ವಜಸ್ತಂಭ ಶೋಭಾಯಾತ್ರೆಗೆ ಚಾಲನೆ ಕಾರ್ಯಕ್ರಮ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಬುಧವಾರ ನಡೆಯಿತು.
ಚಾಲನೆ ನೀಡಿದ ಶ್ರೀ ಕಾಣಿಯೂರು ಶ್ರೀಪಾದರು ಮಾತನಾಡಿ, 1.41 ಕೋ.ರೂ. ವೆಚ್ಚದಲ್ಲಿ ಅಭಿವೃದ್ಧಿಗೊಳ್ಳುತ್ತಿರುವ ದೇಗುಲದ ಕಾರ್ಯ ಶೀಘ್ರವಾಗಿ ವ್ಯವಸ್ಥಿತವಾಗಿ ನೆರವೇರಲಿ ಎಂದು ಆಶೀರ್ವಚನ ನೀಡಿದರು.

Advertisement

ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ, ಉಜ್ವಲ್‌ ಡೆವಲಪರ್ನ ಎಂಡಿ ಪುರುಷೋತ್ತಮ ಪಿ. ಶೆಟ್ಟಿ, ಆರ್ಕಿಟೆಕ್ಟ್ ಶ್ರೀನಾಗೇಶ್‌ ಹೆಗ್ಡೆ, ವಕೀಲರ ಸಂಘದ ಅಧ್ಯಕ್ಷ ಬಿ. ನಾಗರಾಜ್‌, ಕಾಪು ಹೊಸ ಮಾರಿಗುಡಿ ದೇಗುಲದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ, ಉದ್ಯಮಿ ಡಾ| ತಲ್ಲೂರು ಶಿವರಾಮ ಶೆಟ್ಟಿ, ಮಟ್ಟು ಶ್ರೀ ವಿಷ್ಣುಮೂರ್ತಿ ದೇಗುಲದ ಅಧ್ಯಕ್ಷ ಮಟ್ಟು ಲಕ್ಷ್ಮೀನಾರಾಯಣ ರಾವ್‌, ಕೊಡವೂರು ಶ್ರೀ ಶಂಕರನಾರಾಯಣ ದೇಗುಲದ ಅಧ್ಯಕ್ಷ ಸಾಧು ಸಾಲ್ಯಾನ್‌, ಕಾರ್ತಿಕ್‌ ಎಸ್ಟೇಟ್‌ನ ಹರಿಯಪ್ಪ ಕೋಟ್ಯಾನ್‌, ಸ್ವರ್ಣೋದ್ಯಮಿ ಮುರಹರಿ ಕೆ. ಆಚಾರ್ಯ, ಉದ್ಯಮಿ   ಗಳಾದ ರಂಜನ್‌ ಕಲ್ಕೂರ್‌, ತೋನ್ಸೆ ಮನೋಹರ ಶೆಟ್ಟಿ, ನಗರಸಭೆ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ರಮೇಶ್‌ ಕಾಂಚನ್‌, ಭಾರತಿ ಪ್ರಶಾಂತ್‌, ಮಾಜಿ ಸದಸ್ಯ ರಮೇಶ್‌ ನಾಯಕ್‌ ಪೆರಂಪಳ್ಳಿ, ವಿಷ್ಣುಪ್ರಸಾದ್‌ ಪಾಡಿಗಾರು, ದೇಗು ಲದ ತಂತ್ರಿಗಳಾದ ಡಾ| ವಿಟuಲ ತಂತ್ರಿ ಕೊರಂಗ್ರಪಾಡಿ, ಅರ್ಚಕ ಗುರುರಾಜ ಭಟ್‌,ಅನಂತೇಶ್ವರ ದೇಗುಲದ ಪ್ರದಾನ ಅರ್ಚಕ ಸಗ್ರಿ ವೇದವ್ಯಾಸ ಐತಾಳ್‌, ಗಿರಿಧರ ಆಚಾರ್ಯ, ಅನಿ ವಾಸಿ ಭಾರತೀಯ ಉದ್ಯಮಿ ಬಿ.ಕೆ. ಶೆಟ್ಟಿ, ಹರಿಕೃಷ್ಣ ಶಿವತ್ತಾಯ, ದೇಗುಲದ ಆಡಳಿತ ಸಮಿತಿ ಮತ್ತು ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಪದಾಧಿಕಾರಿಗಳು, ಸದಸ್ಯರು, ಭಕ್ತರು ಭಾಗವಹಿಸಿದ್ದರು.

ದೇಗುಲದ ಆಡಳಿತ ಸಮಿತಿ ಅಧ್ಯಕ್ಷ ರುದ್ರಯ್ಯ ಕೆ. ಆಚಾರ್ಯ ಅತಿಥಿಗಳನ್ನು ಗೌರವಿಸಿದರು. ಬ್ರಹ್ಮಕಲಶ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಪ್ರಸಾದ್‌ ಶೆಟ್ಟಿ ಬೈಕಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು.
ಬ್ಯಾಂಡ್‌ಸೆಟ್‌, ಕೀಲು ಕುದುರೆ, ಚೆಂಡೆ ವಾದನ, ಸ್ಯಾಕೊÕàಫೋನ್‌, ವಿವಿಧ ಆಕರ್ಷಕ ವೇಷಭೂಷಣಗಳು, ಅಪಾರ ಭಕ್ತರಿಂದ ಕೂಡಿದ ಶೋಭಾ ಯಾತ್ರೆಯು ಶ್ರೀ ಕೃಷ್ಣಮಠದ ರಾಜಾಂಗಣದ ವಾಹನ ನಿಲ್ದಾಣದಿಂದ ಕಲ್ಸಂಕ, ಗುಂಡಿಬೈಲು, ದೊಡ್ಡಣಗುಡ್ಡೆ ಮಾರ್ಗವಾಗಿ ಸಾಗಿ ದೇಗುಲ ತಲುಪಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next