Advertisement

ಮತಾಂತರ ನಿಷೇಧ ಕಾಯ್ದೆಗೆ ಆಗ್ರಹಿಸಿ ಸೈದಾಪುರ ಬಂದ್

01:24 PM Oct 01, 2021 | Team Udayavani |

ಯಾದಗಿರಿ : ಮತಾಂತರ ನಿಷೇಧ ಕಾಯ್ದೆ ತಕ್ಷಣವೇ ಜಾರಿಗೆ ತರುವಂತೆ ಆಗ್ರಹಿಸಿ ಶುಕ್ರವಾರ ಸೈದಾಪುರ ಬಂದ್ ಆಚರಿಸಲಾಗಿದೆ.

Advertisement

ರಾಜ್ಯದಲ್ಲಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಬಲವಂತದ ಮತಾಂತರ ವಿರೋಧಿಸಿ ಹಿಂದೂ ಪರ ಸಂಘಟನೆಗಳಿಂದ ಬಂದ್ ಗೆ ಕರೆ ನೀಡಲಾಗಿದ್ದು, ಸಂಘಟನೆಯ ಕಾರ್ಯಕರ್ತರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಛತ್ರಪತಿ ಶಿವಾಜಿ ಸಂಘಟನೆಯ ರಾಜ್ಯಾಧ್ಯಕ್ಷ ಪರಶುರಾಮ್ ಶೇಗುರಕರ್, ನೇತೃತ್ವದಲ್ಲಿ ಹಮ್ಮಿಕೊಂಡ ಸೈದಾಪುರ್ ಬಂದ್ ಗೆ ವಿವಿಧ ಸಂಘಟನೆಗಳು ಮತ್ತು ಪಶ್ಚಿಮಾದ್ರಿ ವಿರಕ್ತಮಠದ ಪಂಚಮ ಸಿದ್ದಲಿಂಗ ಸ್ವಾಮೀಜಿ,ಯಾದಗಿರಿಯ ಚನ್ನವೀರ ಸ್ವಾಮೀಜಿಗಳು ಬೆಂಬಲ ಸೂಚಿಸಿ ಉಪವಾಸ ಸತ್ಯಾಗ್ರಹ ದಲ್ಲಿ ಭಾಗವಹಿಸಿದ್ದಾರೆ.

ಬಂದ್ ಕರೆ ಹಿನ್ನಲೆಯಲ್ಲಿ ಪಟ್ಟಣದ ಅಂಗಡಿ ಮುಂಗಟ್ಟುಗಳ ಬಾಗಿಲು ಮುಚ್ಚಲಾಗಿತ್ತು.

Advertisement

ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next