Advertisement

ಕೈಗಾರಿಕಾ ಪ್ರದೇಶಕ್ಕೆ ಸೌಕರ್ಯ ಒದಗಿಸಿ

01:16 PM Dec 22, 2019 | Team Udayavani |

ಸೈದಾಪುರ: ಸಮೀಪದ ಕಡೇಚೂರ ಮತ್ತು ಬಾಡಿಯಾಳ ಕೈಗಾರಿಕಾ ಪ್ರದೇಶಕ್ಕೆ ಶನಿವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಿಜಯಭಾಸ್ಕರ ಭೇಟಿ ನೀಡಿದರು. ಕೈಗಾರಿಕಾ ಪ್ರದೇಶಕ್ಕೆ ಬೇಕಾದ ಮೂಲಭೂತ ಸೌಕರ್ಯಗಳಾದ ವಿದ್ಯುತ್‌, ನೀರು, ರಸ್ತೆಗಳನ್ನು ಪರಿಶೀಲಿಸಿದರು.

Advertisement

ನಂತರ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಅವರು, ವಿದ್ಯುತ್‌ ಒದಗಿಸಲು ವಿಳಂಬ ಮಾಡಿದ ಕೆಪಿಟಿಸಿಎಲ್‌ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಇನ್ನು ಎಷ್ಟು ದಿನಗಳಲ್ಲಿ ವಿದ್ಯುತ್‌ ಒದಗಿಸಲು ಸಾಧ್ಯ. ನೀವು ಇದೇ ರೀತಿ ಕಾಮಗಾರಿ ಪೂರ್ಣಗೊಳಿಸಲು ವಿಳಂಬ ಮಾಡಿದರೆ ಕೈಗಾರಿಕೆಗಳು ಬರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಈ ಪ್ರದೇಶದಲ್ಲಿ ಯಾವುದೇ ಕೈಗಾರಿಕೆಗಳು ತಕ್ಷಣವೇ ಆಗಮಿಸಿದರೆ ಒಂದು ಮೆಗಾ ವ್ಯಾಟ್‌ ವಿದ್ಯುತ್‌ ಲಭ್ಯವಿದೆ. ಈಗಾಗಲೇ 3 ಮೆಗಾ ವ್ಯಾಟ್‌ ವಿದ್ಯುತ್‌ ಸರಬರಾಜು ಮಾಡಲು ಕ್ರಮ ಕೈಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದರು.ಇದಕ್ಕೂ ಮುಂಚಿತವಾಗಿ ಕೈಗಾರಿಕಾ ಪ್ರದೇಶದಲ್ಲಿ ನಡೆಯುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದರು.

ನಂತರ ಕೆಪಿಟಿಸಿಎಲ್‌ ಅಧಿಕಾರಿಗಳೊಡನೆ ವಿದ್ಯುತ್‌ ಸರಬರಾಜು ಹಾಗೂ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್‌, ಜಿಪಂ ಸಿಇಒ ಶಿಲ್ಪಾ ಶರ್ಮಾ, ಸಹಾಯಕ ಆಯುಕ್ತ ಶಂಕರಗೌಡ ಸೋಮನಾಳ, ತಹಶೀಲ್ದಾರ್‌ ಚನ್ನಮಲ್ಲಪ್ಪ ಘಂಟಿ, ಕಂದಾಯ, ಕೈಗಾರಿಕಾ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next