Advertisement

Bantwal ಸಜೀಪಮೂಡ: ಕಾರು -ಬೈಕ್‌ ಢಿಕ್ಕಿ; ಸವಾರ ಗಂಭೀರ

09:56 PM May 22, 2024 | Team Udayavani |

ಬಂಟ್ವಾಳ: ಮೆಲ್ಕಾರ್‌-ಮುಡಿಪು ರಾಜ್ಯ ಹೆದ್ದಾರಿಯ ಸಜೀಪಮೂಡ ಗ್ರಾಮದ ಸುಭಾಷ್‌ನಗರದಲ್ಲಿ ಕಾರು ಹಾಗೂ ಬೈಕ್‌ ಢಿಕ್ಕಿ ಹೊಡೆದುಕೊಂಡ ಪರಿಣಾಮ ಸವಾರ ಗಂಭೀರ ಗಾಯಗೊಂಡ ಘಟನೆ ಮೇ 20ರಂದು ನಡೆದಿದೆ.

Advertisement

ಬೈಕ್‌ ಸವಾರ ಮೊಹಮ್ಮದ್‌ ಅಬ್ದುಲ್ಲಾಬಿ ಸಿದ್ದಿಕ್‌ ಅವರು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆಯ ಕುರಿತು ಸಜೀಪಮುನ್ನೂರಿನ ಮಹಮ್ಮದ್‌ ಇಕ್ಬಾಲ್‌ ಪೊಲೀಸರಿಗೆ ದೂರು ನೀಡಿದ್ದು, ಚಾಲಕ ಅಹಮ್ಮದ್‌ ಕಾರನ್ನು ದುಡುಕುತನ ಹಾಗೂ ನಿರ್ಲಕ್ಷತನದಿಂದ ಚಲಾಯಿಸಿ ಬೈಕಿಗೆ ಢಿಕ್ಕಿ ಹೊಡೆದು ಅಪಘಾತಪಡಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಂಟ್ವಾಳ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next