Advertisement

ರಾಜೀನಾಮೆ ನೀಡಿದ ಸಜ್ಜನ್‌ ಕುಮಾರ್‌

10:26 AM Dec 19, 2018 | Harsha Rao |

ಹೊಸದಿಲ್ಲಿ: ಸಿಕ್ಖ್ ವಿರೋಧಿ ದಂಗೆಯಲ್ಲಿ ಭಾಗಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್‌ ಕುಮಾರ್‌ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರಿಗೆ ಮಂಗಳವಾರ ಪತ್ರ ಬರೆದಿದ್ದಾರೆ. “ತತ್‌ಕ್ಷಣದಿಂದ ಜಾರಿಗೆ ಬರುವಂತೆ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ದಿಲ್ಲಿ ಹೈಕೋರ್ಟ್‌ ನನ್ನ ವಿರುದ್ಧ ತೀರ್ಪು ನೀಡಿದ್ದರಿಂದ ಈ ತೀರ್ಮಾನ ಕೈಗೊಂಡಿದ್ದೇನೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ. 

Advertisement

ತೀರ್ಪಿನಿಂದ ಪಕ್ಷಕ್ಕೆ ಮುಜುಗುರ ಉಂಟಾಗುವುದು ಬೇಡ ಎಂಬ ನಿಟ್ಟಿನಲ್ಲಿ ಅವರು ಈ ತೀರ್ಮಾನ ಕೈಗೊಂಡಿದ್ದಾರೆ ಎನ್ನಲಾಗಿದೆ. ಟ್ವಿಟರ್‌ ಅಥವಾ ಇತರ ಸಾಮಾಜಿಕ ಜಾಲತಾಣಗಳಲ್ಲಿ ಅವರು ಖಾತೆ ಹೊಂದಿಲ್ಲ. ಹೀಗಾಗಿ ಅಲ್ಲಿ ಅವರು ಯಾವುದೇ ಅಭಿಪ್ರಾಯವನ್ನು ವ್ಯಕ್ತಪಡಿಸಿಲ್ಲ. 

ರಾಹುಲ್‌ ಹಾರಿಕೆ ಉತ್ತರ: 1984ರ ಸಿಕ್ಖ್ ವಿರೋಧಿ ದಂಗೆ ಸಂಬಂಧ ಕಾಂಗ್ರೆಸ್‌ ನಾಯಕ ಸಜ್ಜನ್‌ಕುಮಾರ್‌ಗೆ ಶಿಕ್ಷೆಯಾದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಸರಿಯಾದ ಉತ್ತರ ನೀಡದೆ ಜಾರಿಕೊಂಡರು. ಆದರೆ, ಆಗಿನ ಹಿಂಸಾಚಾರದ ಬಗ್ಗೆ ನಾನು ಹಿಂದೆಯೇ ಸ್ಪಷ್ಟವಾಗಿ ಹೇಳಿದ್ದೇನೆ ಎಂದಷ್ಟೇ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next