Advertisement
ಸಕಾಲ ಸೇವೆ ಕಾಯ್ದೆ ಅನ್ವಯ ನಿಗದಿತ ಅವಧಿಯೊಳಗೆ ಅರ್ಜಿ ವಿಲೇವಾರಿ ಮಾಡದಿದ್ದಲ್ಲಿ ದಿನವೊಂದಕ್ಕೆ 20 ರೂ. ದಂಡವನ್ನು ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ವೇತನದಿಂದ ಕಡಿತಗೊಳಿಸಿ ಅರ್ಜಿದಾರರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ವಿಳಂಬ ಧೋರಣೆ ಅನುಸರಿಸುವ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ದಂಡ ವಿಧಿಸಲು ಹಿಂಜರಿಯುವುದಿಲ್ಲ ಎಂದರು.
ಲೋಕೋಪಯೋಗಿ ಇಲಾಖೆ ಸಾರ್ವಜನಿಕರಿಗೆ 34 ಬಗೆಯ ಸೇವೆ ಒದಗಿಸಬೇಕಿದೆ. ಆದರೆ ಚಿತ್ರದುರ್ಗದ ಲೋಕೋಪಯೋಗಿ ಇಲಾಖೆಯ ಕಚೇರಿಗಳಲ್ಲಿ ಸಕಾಲ ಯೋಜನೆಯನ್ನೇ ಪ್ರಾರಂಭಿಸಿಲ್ಲ. ಅದೇ ರೀತಿ ಆಯುಷ್ ಇಲಾಖೆಯಲ್ಲೂ ಇದೇ ಪರಿಸ್ಥಿತಿ ಇದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
Related Articles
Advertisement
ಸರ್ಕಾರದಿಂದ ನಾಗರಿಕರಿಗೆ ನಿಗದಿತ ಅವಧಿಯೊಳಗೆ ಸೇವೆ ಒದಗಿಸುವಂತಹ ಸಕಾಲ ಮಿಷನ್ ಯೋಜನೆಯನ್ನು 2011 ರಲ್ಲಿ ಜಾರಿಗೊಳಿಸಲಾಗಿದೆ. ಈ ಯೋಜನೆಗೆ ನೆರೆ ಹೊರೆಯ ರಾಜ್ಯಗಳಲ್ಲಷ್ಟೇ ಅಲ್ಲ, ಬಾಂಗ್ಲಾದೇಶದಲ್ಲಿಯೂ ಮನ್ನಣೆ ಪಡೆದಿದೆ ಎಂದರು.
ಜಿಪಂ ಸಿಇಒ ಪಿ.ಎನ್. ರವೀಂದ್ರ ಮಾತನಾಡಿ, ಇನ್ನೊಂದು ವಾರದೊಳಗೆ ಜಿಲ್ಲೆಯ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಸಕಾಲ ಯೋಜನೆ ಹಾಗೂ ಆಯಾ ಕಚೇರಿಗಳಲ್ಲಿ ಸಾರ್ವಜನಿಕರಿಗೆ ನೀಡುವ ಸೇವೆಗಳು, ಸಕ್ಷಮ ಪ್ರಾಧಿಕಾರ, ಮೇಲ್ಮನವಿ ಪ್ರಾಧಿಕಾರದ ಸಮಗ್ರ ವಿವರವುಳ್ಳ ಪ್ರದರ್ಶನ ಫಲಕವನ್ನು ಸಾರ್ವಜನಿಕರಿಗೆ ಕಾಣುವ ರೀತಿಯಲ್ಲಿ ಹಾಕಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಈಗಾಗಲೇ ಜಿಲ್ಲೆಯ ಎಲ್ಲ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲಾಗುತ್ತಿದೆ. ಸಕಾಲ ರ್ಯಾಕಿಂಗ್ನಲ್ಲಿ ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿತ್ರದುರ್ಗ ಜಿಲ್ಲೆ ಉತ್ತಮ ಸ್ಥಿತಿಯಲ್ಲಿದೆ ಎಂದು ತಿಳಿಸಿದರು.
ಸಕಾಲ ಮಿಷನ್ ಆಡಳಿತಾಧಿಕಾರಿಯಾಗಿ ಯೋಜನೆಯ ಅನುಷ್ಠಾನದ ಬಗ್ಗೆ ಬಾಂಗ್ಲಾದೇಶದ 1500 ಅಧಿಕಾರಿಗಳಿಗೆ ಆರು ಹಂತಗಳಲ್ಲಿ ತರಬೇತಿ ನೀಡಿದ್ದೇನೆ. ಕರ್ನಾಟಕ ರಾಜ್ಯದ ಸಕಾಲ ಯೋಜನೆಗೆ ಅಂತಾರಾಷ್ಟ್ರೀಯ ಮಟ್ಟದ ಗೂಗಲ್ ಇನ್ನೋವೇಟಿವ್ ಪ್ರಶಸ್ತಿ, ಪ್ರಧಾನಮಂತ್ರಿಗಳ ಎಕ್ಸಲೆನ್ಸಿ ಪ್ರಶಸ್ತಿ ಹಾಗೂ ಕಾಮನ್ವೆಲ್ತ್ ಪ್ರಶಸ್ತಿ ದೊರೆತಿದೆ. ಇದು ಈ ಯೋಜನೆಯ ಸದುದ್ದೇಶ ಹಾಗೂ ಮಹತ್ವವನ್ನು ಬಿಂಬಿಸುತ್ತದೆ.ಕೆ. ಮಥಾಯ್, ಕರ್ನಾಟಕ ಸಕಾಲ ಮಿಷನ್ ಆಡಳಿತಾಧಿಕಾರಿ.