Advertisement

Sakleshpura;ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಮತ್ತೆ ಭೂ ಕುಸಿತ

11:04 AM Jul 17, 2024 | Team Udayavani |

ಸಕಲೇಶಪುರ :ಮಲೆನಾಡು ಭಾಗದಲ್ಲಿ ಮಳೆ ಮುಂದುವರಿದಿದ್ದು ಕೊಲ್ಲಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಬುಧವಾರ ಮತ್ತೆ ಭೂ ಕುಸಿತ ಸಂಭವಿಸಿದೆ.

Advertisement

ಭಾರೀ‌ ಮಳೆಯಿಂದ ಕೊಲ್ಲಹಳ್ಳಿ ಬಳಿ ತಡೆಗೋಡೆ ಕುಸಿತವಾಗಿದೆ. ಸುಮಾರು 25 ಅಡಿಗು ಹೆಚ್ಚು ಪ್ರಮಾಣದ ಮಣ್ಣು ಹಾಕಿ ನಿರ್ಮಿಸಿದ್ದ ರಸ್ತೆ ಇದಾಗಿದ್ದು ಸೂಕ್ತ ತಡೆಗೋಡೆ ನಿರ್ಮಿಸದೆ ಇದ್ದ ಕಾರಣ ಮಣ್ಣು ಕೊಚ್ಚಿ ಹೋಗುತ್ತಿದೆ. 500 ಮೀಟರ್ ಉದ್ದಕ್ಕೆ ರಸ್ತೆಗೆ ಹೊಂದಿಕೊಂದ‌ ತಡೆಗೋಡೆ ಕುಸಿಯುತ್ತಿದ್ದು, ಮಳೆ ಹೆಚ್ಚಾದರೆ ಚತುಷ್ಪಥ ರಸ್ತೆಯ ಒಂದು ಭಾಗದ ಕಾಂಕ್ರಿಟ್ ರಸ್ತೆಯೇ ಕೊಚ್ಚಿ ಹೋಗುವ ಆತಂಕ ಎದುರಾಗಿದೆ.

ಅವೈಜ್ಞಾನಿಕ ಹಾಗೂ ಕಳಪೆ ಕಾಮಗಾರಿಯಿಂದ ರಸ್ತೆ ಕುಸಿತವಾಗುತ್ತಿದೆ ಎಂದು ಆರೋಪ ಕೇಳಿ ಬಂದಿದೆ.
ಮಂಗಳವಾರವೂ ತಾಲೂಕಿನ ಗುಲಗಳಲೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಸಿತ ಸಂಭವಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next