Advertisement

Police Canteen: ಪೊಲೀಸ್‌ ಕ್ಯಾಂಟೀನ್‌ಗಳಲ್ಲಿ ಜೈಲು ಉತ್ಪನ್ನಗಳ ಮಾರಾಟ!

11:57 AM Aug 08, 2023 | Team Udayavani |

ಬೆಂಗಳೂರು: ಕಾರಾಗೃಹಗಳನ್ನು ಸುಧಾರಣಾ ಕೇಂದ್ರಗಳನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಒತ್ತು ಕೊಡುತ್ತಿರುವ ಸರ್ಕಾರ ಕೈದಿಗಳ ಕೌಶಲ್ಯಾಭಿವೃದ್ದಿ ಮತ್ತು ಉದ್ಯೋಗ ಸೃಷ್ಟಿಯ ಅವಕಾಶಗಳನ್ನು ಹೆಚ್ಚಿಸುತ್ತಿದ್ದು, ಅದರ ಭಾಗವಾಗಿ ಇದೀಗ ಜೈಲಿನ ಉತ್ಪನ್ನಗಳನ್ನು ಪೊಲೀಸ್‌ ಇಲಾಖೆಯ ಕ್ಯಾಂಟೀನ್‌ಗಳಲ್ಲಿ ಮಾರಾಟಕ್ಕೆ ಅಸ್ತು ಎಂದಿದೆ.

Advertisement

ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣದಲ್ಲಿ ಪೆಟ್ರೋಲ್‌ ಬಂಕ್‌ ಸ್ಥಾಪನೆಗೆ ರೂಪುರೇಷೆ ಸಿದ್ಧಪಡಿಸಿದ್ದ ಕಾರಾಗೃಹ ಮತ್ತು ಸುಧಾರಣಾ ಇಲಾಖೆ ಇದೀಗ ಜೈಲಿನ ಉತ್ಪನ್ನಗಳನ್ನು ಪೊಲೀಸ್‌ ಇಲಾಖೆಯ ಕ್ಯಾಂಟಿನ್‌ಗಳಲ್ಲಿ ಮಾರಾಟಕ್ಕೆ ಅವಕಾಶ ಪಡೆಯುವಲ್ಲಿ ಯಶಸ್ವಿಯಾಗಿದೆ.

ಅದರಂತೆ ಕಾರಾಗೃಹಗಳಲ್ಲಿ ತಯಾರಾಗುವ ಟಿ-ಶರ್ಟ್‌, ಬೇಕರಿ ತಿನಿಸುಗಳು ಸೇರಿ ಇತರೆ ಉತ್ಪನ್ನಗಳನ್ನು ಕೆಎಸ್‌ಆರ್‌ಪಿ ಕ್ಯಾಂಟೀನ್‌ಗಳು ಹಾಗೂ ಇತರೆ ಎಲ್ಲ ಪೊಲೀಸ್‌ ಕ್ಯಾಂಟೀನ್‌ಗಳಲ್ಲಿ ಮಾರಾಟಕ್ಕೆ ಅನುಮತಿ ನೀಡಿ ರಾಜ್ಯ ಪೊಲೀಸ್‌ ಇಲಾಖೆ ಆದೇಶ ನೀಡಿದೆ.

ಈಗಾಗಲೇ ರಾಜ್ಯದ ಕೇಂದ್ರ ಕಾರಾಗೃಹಗಳ ಆವರಣಲ್ಲಿ ಇಂಡಿಯನ್‌ ಆಯಿಲ್‌ ಕಾರ್ಪೋರೇಷನ್‌(ಐಓಸಿ) ಜತೆ ಒಡಂಬಡಿಕೆ ಮಾಡಿಕೊಂಡು ಪೆಟ್ರೋಲ್‌ ಬಂಕ್‌ಗಳ ಸ್ಥಾಪನೆಗೆ ನೀಲನಕ್ಷೆ ಸಿದ್ಧಪಡಿಸಿ, ಈ ಮೂಲಕ ಇಲಾಖೆ ಮತ್ತು ಸಜಾಬಂಧಿಗಳ ಆದಾಯ ಹೆಚ್ಚಳಕ್ಕೆ ಯೋಜನೆ ರೂಪಿಸಲಾಗಿದೆ.

ಈ ಬೆನ್ನಲ್ಲೇ ಕಾರಾಗೃಹದ ಬೇಕರಿ, ಕೈಮಗ್ಗ ಹಾಗೂ ಕಬ್ಬಿಣ ಉಪಕರಣಗಳ ತಯಾರಿಕಾ ಘಟಕ, ರಾಸಾಯನಿಕ ಘಟಕ, ಮುದ್ರಣಾಲಯ ಹಾಗೂ ಇತರೆ ಘಟಕದಲ್ಲಿ ಉತ್ಪಾದಿಸುವ ವಸ್ತುಗಳ ಮಾರಾಟಕ್ಕೆ ಈ ಹಿಂದೆ ಕಾರಾಗೃಹ ಮುಖ್ಯಸ್ಥರಾಗಿದ್ದ ಅಲೋಕ್‌ ಮೋಹನ್‌ ರಾಜ್ಯ ಪೊಲೀಸ್‌ ಇಲಾಖೆಗೆ ಮನವಿ ಮಾಡಿದ್ದರು.

Advertisement

ಇದಕ್ಕೆ ಸಕರಾತ್ಮಕವಾಗಿ ಸ್ಪಂದಿಸಿರುವ ಪೊಲೀಸ್‌ ಇಲಾಖೆ, ಕೆಎಸ್‌ಆರ್‌ಪಿ, ಸಿಎಆರ್‌, ಡಿಎಆರ್‌ ಕ್ಯಾಂಟೀನ್‌ಗಳಲ್ಲಿ ಅಲ್ಪಾವಧಿ ಮತ್ತು ದೀರ್ಘಾವಧಿ ಕಾಲ ಸಂಗ್ರಹಿಸಿ ಇಡಬಹುದಾದ ಬೇಕರಿಯ ಬ್ರೇಡ್‌, ರಸ್ಕ್, ಖಾರ ಮತ್ತು ಸಿಹಿ ಬೆಣ್ಣೆ ಬಿಸ್ಕೆಟ್‌ಗಳು ಸೇರಿ ಆರೇಳು ರೀತಿಯ ತಿನಿಸುಗಳು ಹಾಗೂ ಕೈಮಗ್ಗದ ಶರ್ಟ್‌ಗಳು (ಅರ್ಥ ತೋಳಿನ, ಪೂರ್ಣ ತೋಳಿನ) ಟಿ-ಶರ್ಟ್‌, ಟವಲ್‌, ಲುಂಗಿ, ಬೆಡ್‌ಶೀಟ್‌ಗಳು, ಕರವಸ್ತ್ರಗಳು, ಫಿನಾಯಿಲ್‌ಗ‌ಳನ್ನು ಮಾರಾಟ ಮಾಡಲಾಗುತ್ತಿದೆ. ಇದರಿಂದ ಕಾರಾಗೃಹ ಇಲಾಖೆಗೆ ಆದಾಯ ಹೆಚ್ಚಳವಾಗಿದೆ.

ಇದೇ ವೇಳೆ ಜೈಲಿನಲ್ಲಿ ತಯಾರಿಸುವ ಕಬ್ಬಿಣದ ಉಪಕರಣಗಳಾದ ಫ‌ರ್ನಿಚರ್‌ಗಳಿಗೆ ಕೋರ್ಟ್‌ ಗಳಿಂದ ಉತ್ತಮ ಬೇಡಿಕೆ ಇದ್ದು, ಅವುಗಳನ್ನು ಬೇಡಿ ಕೆಗೆ ಅನುಗುಣವಾಗಿ ತಯಾರಿಸಿ ಮಾರಾಟ ಮಾಡ ಲಾಗುತ್ತಿದೆ. ಜತೆಗೆ ಕೆಲ ಆಸ್ಪತ್ರೆಗಳಿಗೆ ಬೇಕಾಗುವ ಕಬ್ಬಿಣದ ಬೆಡ್‌ಗಳು ಮತ್ತು ಪಕ್ಕದಲ್ಲಿ ಔಷಧಿಗಳು ಇಡುವ ಫ‌ರ್ನಿಚರ್‌ಗಳನ್ನು ಮಾರಾಟ ಮಾಡಲಾ ಗುತ್ತಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.

ಕೆಎಸ್‌ಆರ್‌ಪಿಯಲ್ಲೂ ಬೇಕರಿಗಳಿವೆ. ಆದರೆ, ಎಲ್ಲ ಉತ್ಪನ್ನಗಳನ್ನು ತಯಾರಿಸುವುದಿಲ್ಲ. ತಮ್ಮ ತಯಾರಿಸದ ಆಹಾರ ಪದಾರ್ಥಗಳನ್ನು ಬೇಡಿಕೆಗೆ ಅನುಸಾರವಾಗಿ ಪಡೆಯಲಾಗಿದೆ. ಜತೆಗೆ ಡಿಎಆರ್‌ ಮತ್ತು ಸಿಎಆರ್‌ ಕ್ಯಾಂಟೀನ್‌ಗಳಲ್ಲಿ ಎಲ್ಲ ಉತ್ಪನ್ನಗಳ ಮಾರಲಾಗುತ್ತಿದೆ. ಹೆಚ್ಚಾಗಿ ಶರ್ಟ್‌ಗಳು, ಕರವಸ್ತ್ರ, ಫಿನಾಯಿಲ್‌, ಟಿ-ಶರ್ಟ್‌ಗಳಿಗೆ ಉತ್ತಮ ಬೇಡಿಕೆ ಇದೆ ಎಂದು ಕೆಎಸ್‌ಆರ್‌ಪಿ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

– ಮೋಹನ್‌ ಭದ್ರಾವತಿ

Advertisement

Udayavani is now on Telegram. Click here to join our channel and stay updated with the latest news.

Next