Advertisement

ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್‌ ಸಮಾವೇಶ

03:20 AM Jul 08, 2017 | Team Udayavani |

ಕೋಟ: ಜೆಡಿಎಸ್‌ ಪಕ್ಷದಲ್ಲಿ  ಕಾರ್ಯಕರ್ತರ ಬೆಳವಣಿಗೆಗೆ ಸಾಕಷ್ಟು ಅವಕಾಶವಿದ್ದು, ಹೆಚ್ಚು ಮಂದಿ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ  ಕುಂದಾಪುರ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್‌ ಅಭ್ಯರ್ಥಿ ಸ್ಪರ್ಧೆ  ಖಚಿತ ಎಂದು  ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಯೋಗೀಶ್‌ ಶೆಟ್ಟಿ ಹೇಳಿದರು.

Advertisement

ಅವರು ಜು.2ರಂದು  ಸಾಲಿಗ್ರಾಮ ಗಿರಿಜಾ ಕಲ್ಯಾಣ ಮಂಟಪದಲ್ಲಿ  ಜರಗಿದ ಸಾಲಿಗ್ರಾಮ ಪ.ಪಂ. ವ್ಯಾಪ್ತಿಯ ಜೆಡಿಎಸ್‌ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ  ಈ ಭಾಗದಲ್ಲಿ ಪಕ್ಷ ಸಂಘಟನೆಗೆ  ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಕ್ಷದ  ಕುಂದಾಪುರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಬ್ಲಾಕ್‌ ಅಧ್ಯಕ್ಷ  ತೆಕ್ಕಟ್ಟೆ  ಪ್ರಕಾಶ ಶೆಟ್ಟಿ ಮಾತನಾಡಿ, ಜೆಡಿಎಸ್‌ ಯುವಕರಿಗೆ ಹೆಚ್ಚು ಆಧ್ಯತೆ  ನೀಡುತ್ತಿದೆ. ಕರಾವಳಿ ಭಾಗದಲ್ಲಿ  ರಾಷ್ಟ್ರೀಯ ಪಕ್ಷಗಳ ರಾಜಕೀಯ ನೀತಿಯಿಂದ ಜನತೆ  ಬೇಸರಗೊಂಡಿದ್ದಾರೆ. ಹೀಗಾಗಿ ಮುಂದೆ ನಮ್ಮ ಪಕ್ಷ ಪ್ರಬಲಗೊಳ್ಳಲಿದೆ ಎಂದರು.

ಪಕ್ಷದ ಉಡುಪಿ ಜಿಲ್ಲಾ ಕಾರ್ಯಧ್ಯಕ್ಷ ವಾಸುದೇವ ರಾವ್‌,  ಜಿಲ್ಲಾ ಪ್ರದಾನ ಕಾರ್ಯದರ್ಶಿ ಶ್ರೀಕಾಂತ್‌ ಅಡಿಗ,  ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಶಾಲಿನಿ ಶೆಟ್ಟಿ, ಮುಖಂಡರಾದ  ಮನ್ಸೂರ್‌ ಮರವಂತೆ, ಮುಕ್ತಾರ್‌ ಕೋಟೇಶ್ವರ್‌, ಮಾಜಿ ಜಿಲ್ಲಾದ್ಯಕ್ಷ  ದಕ್ಷತ್‌ ಶೆಟ್ಟಿ, ಕುಂದಾಪುರ ತಾಲೂಕು ಮೀನುಗಾರ ಘಟಕದ ಉಪಾಧ್ಯಕ್ಷ ಶಿವರಾಜ್‌ ಸಾಲಿಗ್ರಾಮ ಮುಂತಾದವರು ಉಪಸ್ಥಿತರಿದ್ದರು.
 

Advertisement

Udayavani is now on Telegram. Click here to join our channel and stay updated with the latest news.

Next