Advertisement

ಡಿಕೆಶಿ ಕಲೆಕ್ಷನ್ ಗಿರಾಕಿ ಎಂದು ಸಲೀಂ ಸತ್ಯ ಹೇಳಿದ್ದಾರೆ : ಸಚಿವ ಮುನೇನಕೊಪ್ಪ

05:55 PM Oct 13, 2021 | Team Udayavani |

ಧಾರವಾಡ : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರು ಭಾಗಿಯಾಗಿದ್ದಾರೆ ಎನ್ನಲಾದ ಪರ್ಸೆಂಟೇಜ್ ಲಂಚ ಪ್ರಕರಣದ ಬಗ್ಗೆ ಕೆಪಿಸಿಸಿ ಮಾಧ್ಯಮ ಸಮನ್ವಯಕಾರ ಎಂ.ಎ.ಸಲೀಂ ಸತ್ಯವನ್ನೇ ಹೇಳಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

Advertisement

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿ.ಎಸ್.ಉಗ್ರಪ್ಪ ಅವರ ಜತೆ ಮಾತುಕತೆಯಲ್ಲಿ ಡಿಕೆಶಿ ಬಗ್ಗೆ ಸತ್ಯವನ್ನೇ ಹೇಳಿದ್ದಾರೆ. ಈ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಡಿಕೆಶಿ ಕಲೆಕ್ಷನ್ ಗಿರಾಕಿ ವಿಚಾರವಾಗಿ ಅವರ ಪಕ್ಷದವರೇ ಮಾತಾಡಿದ್ದಾರೆ. ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡೋದು ಸೂಕ್ತವಲ್ಲ  ಎಂದರು.

ನಾನು ಬೇರೆ ಪಕ್ಷದಿಂದ ಮಂತ್ರಿಯಾದವನು. ಹೀಗಾಗಿ ನಾನು ಆ ಬಗ್ಗೆ ಮಾತನಾಡುವುದು ಸೂಕ್ತವಲ್ಲ ಎಂದ ಮುನೇನಕೊಪ್ಪ, ಅವರ ಸತ್ಯವನ್ನು ಅವರೇ ಒಪ್ಪಿಕೊಂಡಿದ್ದಾರೆ, ಏನು ನಡೆದಿದೆ ಎನ್ನುವುದನ್ನು ಅವರ ಪಕ್ಷದವರೇ ಹೇಳಿದ್ದಾರೆ. ಜನ ಕೂಡ ಅವರ ಮಾತನ್ನು ಕೇಳಿಸಿಕೊಳ್ಳುತ್ತಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next