Advertisement

ಕುತ್ತಾರು ಕೊರಗಜ್ಜ ಕ್ಷೇತ್ರಕ್ಕೆ ಸಾಲುಮರದ ತಿಮ್ಮಕ್ಕ ಭೇಟಿ

08:50 AM Oct 16, 2022 | Team Udayavani |

ಉಳ್ಳಾಲ: ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರು ಶನಿವಾರ ಕುತ್ತಾರು ಕೊರಗಜ್ಜ ಆದಿಸ್ಥಳ ಹಾಗೂ ರಕ್ತೇಶ್ವರಿ ಹಾಗೂ ಎಳ್ವೆರ್‌ ಸಿರಿಕುಲು ಆದಿಸ್ಥಳಗಳಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

Advertisement

ಎಲ್ಲರಿಗೂ ಒಳಿತನ್ನು ದೈವಶಕ್ತಿಗಳು ಕರುಣಿಸಲಿ. ದೇಶಕ್ಕೆ ಬಾಧಿಸಿರುವ ಸಾಂಕ್ರಾಮಿಕ ದೂರವಾಗಲಿ. ಎಲ್ಲರೂ ಪರಿಸರದೊಂದಿಗಿನ ಕಾಳಜಿಯ ಜತೆಗೆ ಸುಖಕರ ಜೀವನ ನಡೆಸಲಿ. ಪ್ರಕೃತಿ ಆರಾಧನೆಯೇ ದೈವಾರಾಧನೆ ಎಂದು ಅವರು ಹೇಳಿದರು.

ತಿಮ್ಮಕ್ಕ ಅವರ ಸಾಕುಮಗ ಉಮೇಶ್‌ ಮಾತನಾಡಿ, ಈ ಹಿಂದೆ ಆದಿಸ್ಥಳಕ್ಕೆ ಬಂದು ನೆರವೇರಿಸಿದ ಪ್ರಾರ್ಥನೆಗೆ ಫ‌ಲ ದೊರಕಿತ್ತು. ಇದಕ್ಕೆ ಪೂರಕವಾಗಿ ತಾಯಿ ಜತೆಗೆ ಬಂದಿದ್ದೇನೆ. ಅವರಿಗೂ ಇನ್ನಷ್ಟು ಶಕ್ತಿ, ಆರೋಗ್ಯ ನೀಡಲಿ ಹಾಗೂ ಸರ್ವರಿಗೂ ಒಳಿತನ್ನು ಕರುಣಿಸಲಿ ಎಂದರು.

ತಿಮ್ಮಕ್ಕ ಅವರನ್ನು ಮುನ್ನೂರು ಗ್ರಾ.ಪಂ. ಅಧ್ಯಕ್ಷ ವಿಲ್ಫೆಡ್‌ ಡಿ’ಸೋಜಾ ಸಮ್ಮಾನಿಸಿದರು. ಕಂದಾಯ ಅಧಿಕಾರಿ ಮಂಜುನಾಥ್‌, ಪಿಡಿಒ ರಾಜೀವ್‌ ನಾಯ್ಕ, ಗ್ರಾಮಕರಣಿಕೆ ರೇಷ್ಮಾ, ಕುತ್ತಾರು ಶ್ರೀ ಕೊರಗಜ್ಜ ರಕ್ತೇಶ್ವರಿ ಎಳ್ವೆರ್‌ಸಿರಿಕುಲು ದೈವಸ್ಥಾನದ ಹರೀಶ್‌ ಕುತ್ತಾರು ಹಾಗೂ ಇತರರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next