Advertisement

Siddaramaiah ಜತೆ ಒಕ್ಕಲಿಗ ಸಮಾಜ ಸದಾ ನಿಲ್ಲಬೇಕು: ಚಲುವರಾಯಸ್ವಾಮಿ

10:00 PM Sep 11, 2023 | Team Udayavani |

ಮೈಸೂರು: ಒಕ್ಕಲಿಗ ಸಮಾಜದ ಅಭಿವೃದ್ಧಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಾಕಷ್ಟು ಕೊಡುಗೆ ನೀಡಿದ್ದು, ಅವರೊಂದಿಗೆ ಒಕ್ಕಲಿಗ ಸಮಾಜ ಸದಾ ನಿಲ್ಲಬೇಕು. ಜತೆಗೆ ಅಭಿ ಮಾನ ಇಟ್ಟುಕೊಳ್ಳಬೇಕೆಂದು ಕೃಷಿ ಸಚಿವ ಎನ್‌. ಚಲುವರಾಯಸ್ವಾಮಿ ಹೇಳಿದರು.

Advertisement

ನಗರದ ಹೆಬ್ಟಾಳು ಕೈಗಾರಿಕಾ ಪ್ರದೇಶದಲ್ಲಿ ಆದಿಚುಂಚನಗಿರಿ ಶಾಖಾ ಮಠದ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಾತ್ಯತೀತ ವ್ಯಕ್ತಿತ್ವದ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮಾ ಜದ ಪ್ರಗ ತಿಗೆ ಒಂದಿ ಲ್ಲೊಂದು ಕೊಡುಗೆ ನೀಡಿ ದ್ದಾರೆ. ಸಿದ್ದರಾಮಯ್ಯ ಹೆಸರನ್ನು ಮುಂದಿಟ್ಟುಕೊಂಡು ಕೆಲವರು ಒಕ್ಕಲಿಗರ ಸಮಾಜದ ಜನರನ್ನು ದಾರಿತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಅನಗತ್ಯ ವಿಚಾರಗಳು ಚರ್ಚೆಯಾಗುತ್ತಿರುವುದು ನೋವಿನ ಸಂಗತಿ ಎಂದರು.

2013ರಿಂದ 2018ರ ವರೆಗೆ ಸಿಎಂ ಆಗಿದ್ದಾಗ ಸಿದ್ದರಾಮಯ್ಯ ನಾಡುಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಸರ್ಕಾರದಿಂದ ಆಚರಣೆಗೆ ಆದೇಶಿಸಿದ್ದರು. ಜತೆಗೆ, ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಿ ಸಮಾಜದ ಜನರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಆದಿಚುಂಚನಗಿರಿ ಮಠದ ಬೆಳವಣಿಗೆಗೂ ಸಹಕಾರ ಕೊಟ್ಟಿದ್ದಾರೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next