Advertisement

ವಾರಾಣಸಿ; ಪ್ರಧಾನಿ ವಿರುದ್ಧ SP ಅಭ್ಯರ್ಥಿ ಮಾಜಿ ಯೋಧ ತೇಜ್ ಬಹದೂರ್ ಅಖಾಡಕ್ಕೆ

08:40 AM Apr 30, 2019 | Team Udayavani |

ನವದೆಹಲಿ: ಉತ್ತರಪ್ರದೇಶದ ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಸಮಾಜವಾದಿ ಪಕ್ಷ, ಬಹುಜನ್ ಸಮಾಜ್ ಪಕ್ಷ ಹಾಗೂ ರಾಷ್ಟ್ರೀಯ ಲೋಕ ದಳದ ಮೈತ್ರಿ ಅಭ್ಯರ್ಥಿಯಾಗಿ ಬಿಎಸ್ ಎಫ್ ನ ಮಾಜಿ ಯೋಧ ತೇಜ್ ಬಹದೂರ್ ಯಾದವ್ ಅವರನ್ನು ಕಣಕ್ಕಿಳಿಸಿದೆ.

Advertisement

ಸೈನ್ಯದಲ್ಲಿ ಯೋಧರಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಾರೆ ಎಂಬ ಹೇಳಿಕೆ ನೀಡಿದ್ದ ತೇಜ್ ಬಹದೂರ್ ಯಾದವ್ ವಿಡಿಯೋ ವೈರಲ್ ಆಗಿದ್ದು, ತದನಂತರ ಮಿಲಿಟರಿ ಆಂತರಿಕೆ ತನಿಖೆ ಬಳಿಕ 2017ರಲ್ಲಿ ಬಿಎಸ್ ಎಫ್ ಯಾದವ್ ಅವರನ್ನು ಕರ್ತವ್ಯದಿಂದ ವಜಾಗೊಳಿಸಿತ್ತು. ತಾನು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಈ ಮೊದಲು ಯಾದವ್ ಹೇಳಿಕೆ ನೀಡಿದ್ದರು.

ಪ್ರಧಾನಿ ನರೇಂದ್ರ ಮೋದಿ ಅವರ ಪ್ರತಿಸ್ಪರ್ಧಿಯಾಗಿ ಶಾಲಿನಿ ಯಾದವ್ ಅವರನ್ನು ವಾರಾಣಸಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವುದಾಗಿ ಸಮಾಜವಾದಿ ಪಕ್ಷ ಹೇಳಿತ್ತು. ಇದೀಗ ಶಾಲಿನಿ ಬದಲು ಯಾದವ್ ಗೆ ಬಿ ಫಾರಂ ನೀಡಿ ಕಣಕ್ಕಿಳಿಸಿದೆ. ಮೇ 19ರಂದು ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.

ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಆದರೆ ಕೊನೆದಿನ ಕಾಂಗ್ರೆಸ್ ಪಕ್ಷ ಅಜಯ್ ರಾಯ್ ಅವರನ್ನು ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next