Advertisement

ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷದ ಮುಖಂಡನನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

09:54 AM Jan 13, 2020 | Team Udayavani |

ನವದೆಹಲಿ: ಸಮಾಜವಾದಿ ಪಕ್ಷದ(ಎಸ್ ಪಿ)  ಮುಖಂಡ ಬಿಜ್ಲಿ ಯಾದವ್ ನನ್ನು ಅಪರಿಚಿತ ವ್ಯಕ್ತಿಗಳು ಉತ್ತರಪ್ರದೇಶದ ಮಾವೋ ಜಿಲ್ಲೆಯ ಮುಹಮ್ಮದಾಬಾದ್ ನಲ್ಲಿ ಗುಂಡಿಕ್ಕಿ ಹತ್ಯೆಗೈದಿದ್ದಾರೆ.  ಈ ಘಟನೆ ಇಂದು ಮುಂಜಾನೆ ನಡೆದಿದೆ.

Advertisement

ಸಖ್ವಾಲಿಯಾ ಗ್ರಾಮದ ಮಾಜಿ ಗ್ರಾಮ ಮುಖ್ಯಸ್ಥರಾಗಿದ್ದ ಯಾದವ್, ಇಂದು ಬೆಳಗ್ಗೆ ಹೊಲಕ್ಕೆ ಹೋಗುವಾಗ ಗುಂಡು ಹಾರಿಸಲಾಗಿದ್ದು ಸ್ಥಳದಲ್ಲೇ ಮೃತರಾಗಿದ್ದಾರೆ. ಇವರಿಗೆ 40 ವರ್ಷ ವಯಸ್ಸಾಗಿತ್ತು.  ಬೈಕ್ ನಲ್ಲಿ ಬಂದಿದ್ದ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ಧಾರೆ.

Advertisement

Udayavani is now on Telegram. Click here to join our channel and stay updated with the latest news.

Next