Advertisement

ವಿಚ್ಛೇದನಕ್ಕೆ “ಅಕ್ರಮ ಸಂಬಂಧ” ಕಾರಣ ಎಂದವರಿಗೆ ಉತ್ತರ ಕೊಟ್ಟ ನಟಿ ಸಮಂತಾ

07:49 PM Oct 08, 2021 | Team Udayavani |

ಹೈದರಾಬಾದ್ : ಪ್ರೀತಿಸಿ ಮದುವೆಯಾಗಿದ್ದ ಪತಿ ನಾಗಚೈತನ್ಯ ಅವರಿಗೆ ನಟಿ ಸಮಂತಾ ವಿಚ್ಛೇದನ ನೀಡಿದ ಬಳಿಕ ಸಾಕಷ್ಟು ಊಹಾಪೋಹಗಳು ಕೇಳಿ ಬಂದಿದ್ದವು. ಈ ಜೋಡಿಯ ದಾಂಪತ್ಯ ಜೀವನ ಮುರಿದು ಬೀಳಲು ಹಲವು ಕಾರಣಗಳನ್ನು ಜನರೇ ಕಂಡುಕೊಂಡಿದ್ದರು. ಅವುಗಳಿಗೆ ಇದೀಗ ಸಮಂತಾ ತೆರೆ ಎಳೆದಿದ್ದಾರೆ. ಜೊತೆಗೆ ಇಲ್ಲಸಲ್ಲದ ಸಂಬಂಧ ಕಲ್ಪಿಸಿದವರಿಗೆ ಖಡಕ್ ಉತ್ತರ ನೀಡಿದ್ದಾರೆ.

Advertisement

ಇಂದು ಈ ಬಗ್ಗೆ ಟ್ವೀಟ್ ಮಾಡಿರುವ ಸಮಂತಾ, ‘ನನಗೆ ಬೇರೆ ಸಂಬಂಧವಿತ್ತು, ಗರ್ಭಪಾತ ಮಾಡಿಸಿಕೊಂಡಿದ್ದೆ ಎಂದೆಲ್ಲ ವದಂತಿ ಹರಡಲಾಗಿತ್ತು. ಆದರೆ ಅವುಗಳೆಲ್ಲ ಸುಳ್ಳು,’ ಎಂದಿರುವ ಸಮಂತಾ, ಈ ಸಂದರ್ಭದಲ್ಲಿ ನನ್ನ ಜತೆಗಿರುವ ಎಲ್ಲರಿಗೂ ಧನ್ಯವಾದಗಳು, ನನ್ನ ಬಗ್ಗೆ ಹಲವು ಊಹಾಪೋಹಗಳು ಹರಡಿವೆ, ನನಗೆ ಬೇರೆ ಸಂಬಂಧವಿತ್ತು, ನಾನು ಗರ್ಭಪಾತ ಮಾಡಿಸಿಕೊಂಡಿದ್ದೆ, ನನಗೆ ಮಕ್ಕಳು ಬೇಕಿರಲಿಲ್ಲ ಮತ್ತು ನಾನು ಅವಕಾಶವಾದಿಯಾಗಿದ್ದೆ ಎಂದೆಲ್ಲ ಹೇಳಿದ್ದರು. ಆದರೆ ಅವೆಲ್ಲವೂ ನಿಜವಲ್ಲ. ವಿಚ್ಛೇದನದ ನೋವೇ ದೀರ್ಘವಾದದ್ದು. ಅದರ ಜತೆಗೆ ಇಂತಹ ಮಾತುಗಳ ಮೂಲಕ ನನ್ನ ಮನಸ್ಸನ್ನು ಘಾಸಿಗೊಳಿಸಲಾಗುತ್ತಿದೆ. ಇದಕ್ಕೆ ನಾನು ಅವಕಾಶ ಕೊಡುವುದಿಲ್ಲ. ನನ್ನ ಬಗೆಗಿನ ವದಂತಿಗಳೆಲ್ಲವೂ ಸುಳ್ಳು ಎಂದು ಹೇಳುತ್ತಿದ್ದೇನೆ. ಇದರಿಂದ ಹೊರಬರಲು ನನಗೆ ಇನ್ನಷ್ಟು ಸಮಯ ಬೇಕಿದೆ ಎಂದು ಸಮಂತಾ ಹೇಳಿಕೊಂಡಿದ್ದಾರೆ.

2017 ರಲ್ಲಿ ಮದುವೆಯಾಗಿದ್ದ ನಾಗಚೈತನ್ಯ ಹಾಗೂ ಸಮಂತಾ ಈ ವರ್ಷದ ಅಕ್ಟೋಬರ್ 2 ರಂದು ವಿಚ್ಛೇದನ ಘೋಷಿಸಿದರು. ಇವರು ಸತಿ-ಪತಿ ಸಂಬಂಧ ಕಡಿದುಕೊಳ್ಳುತ್ತಿರುವುದು ಎಲ್ಲರಿಗೂ ಆಘಾತವನ್ನುಂಟು ಮಾಡಿತು. ವಿಚ್ಛೇದನಕ್ಕೆ ಕಾರಣಗಳೇನು ಎಂಬುದರ ಕುರಿತು ಹಲವು ವದಂತಿಗಳು ಹರಡಿದ್ದವು. ಅವುಗಳಿಗೆ ಸಮಂತಾ ಅವರಿಂದು ಉತ್ತರ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next