Advertisement

ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘ; “ಸಮೃದ್ಧಿ ಸಹಕಾರಿ ಸೌಧ’ಲೋಕಾರ್ಪಣೆ

12:53 PM Mar 12, 2023 | Team Udayavani |

ಬೆಳ್ಮಣ್‌: ಸಮಾಜ ಮುಖಿ ಚಿಂತನೆ ಹಾಗೂ ಸೇವೆಗೆ ಸಹಕಾರ ಕ್ಷೇತ್ರ ಹೆಸರಾಗಿದ್ದು ರಾಷ್ಟ್ರೀಯ ಬ್ಯಾಂಕ್‌ಗಳ ವಿಲೀನದಿಂದ ಗ್ರಾಹಕರಿಗೆ ತೊಂದರೆಯಾದಾಗ ಸಹಕಾರಿ ಬ್ಯಾಂಕ್‌ಗಳು ಮನೆ ಮನೆಗೆ ತಲುಪಿ ಉನ್ನತ ಸೇವೆ ನೀಡಿವೆ ಎಂದು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಹೇಳಿದರು.

Advertisement

ಅವರು ಶನಿವಾರ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ “ಸಮೃದ್ಧಿ ಸಹಕಾರಿ ಸೌಧ’ದ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮುಂಡ್ಕೂರು ಶ್ರೀ ದುರ್ಗಾಪರ ಮೇಶ್ವರೀ ದೇವಸ್ಥಾನದ ಪ್ರಧಾನ ಅರ್ಚಕ ವೇ|ಮೂ| ರಾಮದಾಸ ಆಚಾರ್ಯ ಶುಭಾಶಂಸನೆಗೈದರು.

ಸಹಕಾರಿ ಸೌಧವನ್ನು ಸಚಿವ ವಿ. ಸುನಿಲ್‌ ಕುಮಾರ್‌, ನವೋದಯ ಸಹಕಾರಿ ಭವನವನ್ನು ಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ, ಭದ್ರತಾ ಕೊಠಡಿಯನ್ನು ರಾಜ್ಯ ಸಹಕಾರ ಮಾರಾಟ ಮಹಾ ಮಂಡಲದ ನಿರ್ದೇಶಕ ಐಕಳಬಾವ ಡಾ| ದೇವಿಪ್ರಸಾದ್‌ ಶೆಟ್ಟಿ ಬೆಳಪು, ರಸಗೊಬ್ಬರ ವಿಭಾಗವನ್ನು ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಪಡಿತರ ವಿಭಾಗವನ್ನು ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ ಹಾಗೂ ಆಡಳಿತ ಕಚೇರಿಯನ್ನು ಮುಂಡ್ಕೂರು ದೊಡ್ಡಮನೆ ಫ್ಯಾಮಿಲಿ ಟ್ರಸ್ಟ್‌ ಅಧ್ಯಕ್ಷ ಡಾ| ಎನ್‌. ಎಸ್‌. ಶೆಟ್ಟಿ ಉದ್ಘಾಟಿಸಿದರು.

ಮುಂಡ್ಕೂರು ಚರ್ಚ್‌ ಧರ್ಮ ಗುರು ವಂ| ರೊನಾಲ್ಡ್‌ ಮಿರಾಂದ, ಆರ್‌ಜೆಎಂ ಖತೀಬ ಹಾರಿಸ್‌ ಮದನಿ, ಮುಂಡ್ಕೂರು ಗ್ರಾ.ಪಂ. ಅಧ್ಯಕ್ಷೆ ಸುಶೀಲಾ ಬಾಬು, ಉಪಾಧ್ಯಕ್ಷ ಭಾಸ್ಕರ ಎಂ. ಶೆಟ್ಟಿ, ಇನ್ನಾ ಗ್ರಾ.ಪಂ. ಅಧ್ಯಕ್ಷ ಕುಶ ಆರ್‌. ಮೂಲ್ಯ, ವಿಠೊಭ ದೇವಸ್ಥಾನದ ಮೊಕ್ತೇಸರ ವೆಂಕಟೇಶ್‌ ಕಾಮತ್‌, ಜಾರಿಗೆಕಟ್ಟೆ ಶ್ರೀ ಕೊರಗಜ್ಜ ಕ್ಷೇತ್ರದ ಧರ್ಮದರ್ಶಿ ದಿವಾಕರ ಪೂಜಾರಿ, ಕಜೆ ಮಾರಿಗುಡಿ ದೇವಸ್ಥಾನದ ಗೌರವಾಧ್ಯಕ್ಷ ಎಂ.ಜಿ. ಕರ್ಕೇರಾ, ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ವಿನಯ್‌ ಕುಮಾರ್‌ ಶೆಟ್ಟಿ, ಪ್ರಗತಿಪರ ಕೃಷಿಕ ಸುಬೋಧ ಶೆಟ್ಟಿ, ಉಪಾಧ್ಯಕ್ಷ ಸಿಲ್ವೆಸ್ಟರ್‌ ಡಿ’ಮೆಲ್ಲೊ, ನಿರ್ದೇಶಕರಾದ ಪ್ರವೀಣ್‌ ಶೆಟ್ಟಿ ಇನ್ನಾ, ಮಹಾಬಲ ಪೂಜಾರಿ, ಅಮರನಾಥ ಶೆಟ್ಟಿ ಇನ್ನಾ, ಉಮೇಶ್‌ ಶೆಟ್ಟಿ, ಪುರುಷೋತ್ತಮ ಪೂಜಾರಿ, ಅಶೋಕ್‌ ಶೆಟ್ಟಿ ಖಂಡಿಗ, ಸಂಜೀವ, ಅನಸೂಯ ಸುಧಾಕರ ಶೆಟ್ಟಿ, ಲತಾ ಭಟ್‌ ಪೊಸ್ರಾಲು, ಕು| ಲೀಲಾ, ಜಯಂತ್‌ ಕುಮಾರ್‌ (ಆರ್ಥಿಕ ಪ್ರತಿನಿಧಿ) ಹಾಗೂ ಇತರ ಸ. ಸಂಘಗಳ ಅಧ್ಯಕ್ಷರು ಹಾಗೂ ಬ್ಯಾಂಕಿನ ಸಿಬಂದಿಗಳಿದ್ದರು.

Advertisement

ಡಾ| ರಾಜೇಂದ್ರ ಕುಮಾರ್‌ ಸಹಿತ ಎಲ್ಲರನ್ನೂ ಗೌರವಿಸಲಾಯಿತು. ಮುಂಡ್ಕೂರು ವ್ಯ.ಸೇ.ಸ. ಸಂಘದ ಅಧ್ಯಕ್ಷ ಎಂ. ವಾದಿರಾಜ ಶೆಟ್ಟಿ ಸ್ವಾಗತಿಸಿದರು. ಸಿಇಒ ಅರುಣ್‌ ಕುಮಾರ್‌ ವರದಿ ನೀಡಿ, ಸಾಯಿನಾಥ ಶೆಟ್ಟಿ, ಶರತ್‌ ಶೆಟ್ಟಿ ಅಭಿನಂದನೆಗೈದರು. ಉಪಾಧ್ಯಕ್ಷ ಸಿಲ್ವೆಸ್ಟರ್‌ ಡಿ’ಮೆಲ್ಲೊ ವಂದಿಸಿ, ಸಂಗೀತಾ ಕುಲಾಲ್‌ ನಿರ್ವಹಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next