Advertisement

ನ. 23ರಿಂದ ಆ್ಯಪ್‌ ಬಳಸಿ ಮರಳು ವಿತರಣೆ: ಡಿಸಿ

01:11 AM Nov 21, 2019 | mahesh |

ಉಡುಪಿ: ಜಿಲ್ಲೆಯಲ್ಲಿ ನ. 23ರಿಂದ ಉಡುಪಿ ಇ-ಸ್ಯಾಂಡ್‌ ಆ್ಯಪ್‌ ಮೂಲಕ ಜಿಲ್ಲಾ ವ್ಯಾಪ್ತಿಯ ಸಾರ್ವಜನಿಕರು ಮತ್ತು ಅಭಿವೃದ್ಧಿ ಕಾಮಗಾರಿಗಳಿಗೆ ಮರಳನ್ನು ವಿತರಿಸುವ ಕಾರ್ಯ ಪ್ರಾರಂಭಗೊಳ್ಳಲಿದ್ದು, ಆವಶ್ಯಕತೆ ಇರುವವರು UDUPI E SAND APP ಮೂಲಕ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ. ನ. 23ರಂದು ಬೆಳಗ್ಗೆ 10 ಗಂಟೆಗೆ ಇ-ಸ್ಯಾಂಡ್‌ ಆ್ಯಪ್‌ ಮೂಲಕ ಮರಳು ವಿತರಣೆ ಆರಂಭವಾಗಲಿದ್ದು, ಯಾವುದೇ ಕಾರಣಕ್ಕೂ ಜಿಲ್ಲೆಯಿಂದ ಹೊರಗೆ ಮರಳು ಪೂರೈಸಲು ಅವಕಾಶವಿಲ್ಲ ಎಂವರು ತಿಳಿಸಿದ್ದಾರೆ.

Advertisement

ಮರಳನ್ನು ಸಾಗಾಟ ಮಾಡಲು ಇಚ್ಛಿಸುವವರು ತಮ್ಮ ವಾಹನಗಳನ್ನು ಉಡುಪಿ ಇ-ಸ್ಯಾಂಡ್‌ ಆ್ಯಪ್‌ನಲ್ಲಿ ನೊಂದಾಯಿಸಿಕೊಳ್ಳಲು ಈಗಾಗಲೇ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ, ಹಿರಿಯ ಭೂ ವಿಜ್ಞಾನಿಯವರ ಕಚೇರಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಉಡುಪಿ ಜಿಲ್ಲೆ ದೂ.ಸಂ. 0820-2572333ನ್ನು ಸಂಪರ್ಕಿಸಬಹುದು ಎಂದವರು ತಿಳಿಸಿದ್ದಾರೆ.

ಡಿ.1ರಿಂದ ಫಾಸ್ಟ್ಯಾಗ್‌ ಕಡ್ಡಾಯ
ದೇಶದಾದ್ಯಂತ ಡಿ. 1ರಿಂದ ಎಲ್ಲ ಹೆದ್ದಾರಿ ಟೋಲ್‌ಗ‌ಳಲ್ಲಿ ಕಡ್ಡಾಯ ಫಾಸ್ಟಾಗ್‌ ಅಳವಡಿಕೆಗೆ ಕೇಂದ್ರ ಸರಕಾರ ಆದೇಶ ಹೊರಡಿಸಿದ್ದು, ಎಲ್ಲ ವಾಹನಗಳ ಮಾಲಕರು ವಾಹನಗಳಿಗೆ ಫಾಸ್ಟಾಗ್‌ ಕಡ್ಡಾಯವಾಗಿ ಅಳವಡಿಸಬೇಕೆಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಫಾಸ್ಟಾಗ್‌ ಇರದ ವಾಹನಗಳು ನಿಗದಿತ ಶುಲ್ಕದ ಎರಡು ಪಟ್ಟು ನೀಡಬೇಕಾಗುತ್ತದೆ ಎಂದು ತಿಳಿಸಿದ ಡಿಸಿ, ಫಾಸ್ಟಾಗ್‌ ಸೌಲಭ್ಯವನ್ನು ಎಲ್ಲ ಟೋಲ್‌ಗ‌ಳಲ್ಲಿ ಮತ್ತು ಸಂಬಂಧಿಸಿದ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಪಡೆಯಬಹುದಾಗಿದೆ ಎಂದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರ ಚಂದ್ರ, ಆರ್‌ಟಿಒ ರಾಮಕೃಷ್ಣ ರೈ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ರಮೇಶ್‌ ಬಾಬು, ನವಯುಗದ ಶಿವಪ್ರಸಾದ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next