Advertisement

ಮರಳುಗಾರಿಕೆ ಮೇಲೆ ನಿಗಾ : ಜಿಲ್ಲಾಡಳಿತದಿಂದ ಇಂಟಗ್ರೇಟೆಡ್‌ ಸಾಫ್ಟ್‌ವೇರ್‌

11:47 PM Feb 25, 2021 | Team Udayavani |

ಮಹಾನಗರ : ಮರಳುಗಾರಿಕೆ ಮತ್ತು ಸರಬರಾಜಿನಲ್ಲಿ ಹೆಚ್ಚು ಪಾರದರ್ಶಕ ತರುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಇಂಟಗ್ರೆಟೇಡ್‌ ಸಾಫ್ಟ್‌ವೇರ್‌ ( ಸಮಗ್ರ ಮಾಹಿತಿ ಒಳಗೊಂಡ ತಂತ್ರಾಂಶ) ರೂಪಿಸುವ ನಿಟ್ಟಿನಲ್ಲಿ ಕಾಯೊìನ್ಮುಖವಾಗಿದೆ. ಇದಕ್ಕಾಗಿ ಪ್ರಸ್ತುತವಿರುವ ಎಲ್ಲ ತಂತ್ರಾಂಶಗಳನ್ನು ಒಂದೇ ತಂತ್ರಾಂಶದೊಳಗೆ ತರಲು ಪೂರಕ ಯೋಜನೆಗಳನ್ನು ರೂಪಿಸಲಾಗುತ್ತಿದೆ.

Advertisement

ನೂತನವಾಗಿ ರೂಪುಗೊಳ್ಳುವ ಇಂಟಗ್ರೇಟಡ್‌ ಸಾಫ್ಟ್‌ವೇರ್‌ನಲ್ಲಿ ಮರಳು ಗಾರಿಕೆ ದಿಬ್ಬಗಳಿಂದ ಮರಳು ತೆಗೆದು ಬೇಡಿಕೆ ಸಲ್ಲಿಸಿರುವವವರ ತಾಣಕ್ಕೆ ಮರಳು ಸರಬರಾಜು ಆಗುವವರೆಗಿನ ಎಲ್ಲ ಮಾಹಿತಿಗಳು ಒಳ್ಳಗೊಳ್ಳಲಿದೆ. ಇದಕ್ಕಾಗಿ ನೂತನ ಆ್ಯಪ್‌ವೊಂದನ್ನು ಸಿದ್ಧಪಡಿ ಸಲಾಗುವುದು. ಈ ಆ್ಯಪ್‌ ಸಾರ್ವಜನಿಕರಿಗೂ ಲಭ್ಯವಿರಲಿದ್ದು ಪ್ರತಿಯೊಂದು ಹಂತವನ್ನು ಆ್ಯಪ್‌ ಮೂಲಕ ವೀಕ್ಷಿಸಬಹುದಾಗಿದೆ. ಇದನ್ನು ಪ್ರಾಯೋಗಿಕವಾಗಿ ಒಂದು ದಿಬ್ಬದಲ್ಲಿ ಅಳವಡಿಸಿ ಬಳಿಕ ಇತರೆಡೆಗೆ ವಿಸ್ತರಿಸುವ ಯೋಜಿಸಲಾಗಿದೆ.

ಮರಳು ದಿಬ್ಬಗಳನ್ನು ತೆರವುಗೊಳಿಸಲು ಬಳಸುವ ದೋಣಿಗಳಿಗೆ ಹಾಗೂ ಮರಳು ಸಾಗಾಣಿಕೆ ವಾಹನಗಳಿಗೆ ಈಗಾಗಲೇ ಜಿಪಿಎಸ್‌ ಅಳವಡಿಸಲಾಗಿದೆ. ಮರಳು ದಿಬ್ಬ ಕೇಂದ್ರಗಳ ಬಳಿ ಕೆಮ ರಾಗಳನ್ನು ಅಳವಡಿಸಲಾಗುತ್ತಿದೆ. ಸ್ಯಾಂಡ್‌ ಬಜಾರ್‌ ಆ್ಯಪ್‌ ಮೂಲಕ ಜಿಲ್ಲೆಯಲ್ಲಿ ನಡೆಯುವ ಕಾಮಗಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಮರಳು ಪೂರೈಸಲಾಗುತ್ತಿದೆ. ಇದಲ್ಲದೆ ವಿವಿಧ ಪೊಲೀಸ್‌ ಚೆಕ್‌ಪೋಸ್ಟ್‌ಗಳಲ್ಲಿ ಸಿಸಿ ಕೆಮರಾಗಳಿರುತ್ತದೆ. ಈ ಎಲ್ಲ ವ್ಯವಸ್ಥೆಗಳನ್ನು ಒಂದೇ ತಂತ್ರಾಂಶದೊಳಗೆ ತಂದು ಒಂದು ಆ್ಯಪ್‌ನಲ್ಲಿ ಅಳವಡಿಸುವ ಯೋಜನೆ ಇಂಟಿಗ್ರೇಟೆಡ್‌ ಸಾಫ್ಟ್ವೇರ್‌ ಆಗಿದೆ. ಆ್ಯಪ್‌ ರೂಪುಗೊಂಡ ಬಳಿಕ ಇದನ್ನು ಮೊಬೈಲ್‌ಗೆ ಲಿಂಕ್‌ ಮಾಡಲಾಗುತ್ತದೆ. ಸಾರ್ವಜನಿಕರು ಇದನ್ನು ಡೌನ್‌ಲೋಡ್‌ ಮಾಡಿಕೊಂಡು ವೀಕ್ಷಿಸುವ ಅವಕಾಶ ಒದಗಿಸಲಾಗುತ್ತದೆ.
ಸಿಆರ್‌ಝಡ್‌ ವ್ಯಾಪ್ತಿಯೊಳಗೆ ಬರುವ ನೇತ್ರಾವತಿ ನದಿಯಲ್ಲಿ 8, ಗುರುಪುರ ನದಿಯಲ್ಲಿ 4 ಹಾಗೂ ಶಾಂಭವಿ ನದಿಯಲ್ಲಿ 1 ಬ್ಲಾಕ್‌ ಸಹಿತ 13 ಬ್ಲಾಕ್‌ಗಳಲ್ಲಿ (ದಿಬ್ಬ) ಈ ಬಾರಿ ಮರಳು ತೆರವಿಗೆ ಅನುಮತಿ ನೀಡಲಾಗಿದೆ. ಒಟ್ಟು 104 ಮಂದಿಗೆ ಮರಳು ತೆಗೆಯಲು ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ತಾತ್ಕಾಲಿಕ ಪರವಾನಿಗೆ ನೀಡಿದೆ.

ತಾತ್ಕಾಲಿಕ ಪರವಾನಿಗೆ ನೀಡಲಾಗಿದೆ. ಸಿಆರ್‌ಝಡ್‌ ಅನುಮತಿಯಂತೆ ಗುರುತಿಸ ಲಾಗಿರುವ 13 ದಿಬ್ಬಗಳಲ್ಲಿನ 10,58,598 ಮೆ. ಟನ್‌ ಮರಳು ತೆರವುಗೊಳಿಸಬಹುದಾಗಿದೆ.

ಒಂದೇ ತಂತ್ರಾಂಶದಲ್ಲಿ ಸಮಗ್ರ ಮಾಹಿತಿ
ಮರಳುಗಾರಿಕೆ ಹಾಗೂ ಸರಬರಾಜು ವ್ಯವಸ್ಥೆಯಲ್ಲಿ ಪ್ರಸ್ತುತ ಇರುವ ವಿವಿಧ ತಂತ್ರಾಂಶ ಹಾಗೂ ನಿಗಾ ವ್ಯವಸ್ಥೆಗಳನ್ನು ಒಟ್ಟುಗೂಡಿಸಿ ಒಂದೇ ವೇದಿಕೆಯಡಿ ತರುವ ನಿಟ್ಟಿನಲ್ಲಿ ಇಂಟಗ್ರೆಟೇಡ್‌ ಸಾಫ್ಟ್‌ವೇರ್‌ ಸಿದ್ಧಪಡಿಸಲು ಉದ್ದೇಶಿಸಲಾಗಿದೆ. ತಂತ್ರಾಂಶ ಹಾಗೂ ಆ್ಯಪ್‌ ರೂಪಿಸುವ ಬಗ್ಗೆ ಪೂರಕ ಪ್ರಕ್ರಿಯೆಗಳನ್ನು ಸದ್ಯದಲ್ಲೇ ಪ್ರಾರಂಭಿಸಲಾಗುವುದು.
-ಡಾ| ರಾಜೇಂದ್ರ ಕೆ.ವಿ., ದ.ಕನ್ನಡ ಜಿಲ್ಲಾಧಿಕಾರಿ

Advertisement

– ಕೇಶವ ಕುಂದರ್‌

Advertisement

Udayavani is now on Telegram. Click here to join our channel and stay updated with the latest news.

Next