Advertisement

ಗೋಣಿ ಚೀಲಗಳಲ್ಲಿ ಮರಳು ಸಾಗಾಟ: ಪರಿಶೀಲನೆ

08:15 PM May 22, 2019 | Team Udayavani |

ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ದಂಧೆಗೆ ಕಡಿವಾಣ ಹಾಕುವಲ್ಲಿ ಪುತ್ತೂರು ತಾಲೂಕು ದಂಡಾಧಿಕಾರಿ ಡಾ| ಪ್ರದೀಪ್‌ ಕುಮಾರ್‌ ಬುಧವಾರ ಸ್ಥಳ ಪರಿಶೀಲನೆ ನಡೆಸಿದರು. ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ನೇತ್ರಾವತಿ ನದಿ ಕಿನಾರೆಯಲ್ಲಿ ಗೋಣಿ ಚೀಲಗಳಲ್ಲಿ ಮರಳನ್ನು ಅಕ್ರಮವಾಗಿ ಸಾಗಿಸುತ್ತಿರುವ ಕುರಿತಾಗಿ “ಉದಯವಾಣಿ’ ಸುದಿನ ಇತ್ತೀಚೆಗೆ ವರದಿ ಪ್ರಕಟಿಸಿತ್ತು. ಇದನ್ನು ಗಮನಿಸಿದ ತಾಲೂಕು ದಂಡಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Advertisement

ಪರಿಶೀಲನೆ ವೇಳೆ, ಬೆಳ್ತಂಗಡಿ ತಾಲೂಕಿನ ಗಡಿ ಗ್ರಾಮವಾದ ಮೊಗ್ರು ವ್ಯಾಪ್ತಿಯಲ್ಲಿ ಈ ದಂಧೆ ಅವ್ಯಾಹತವಾಗಿ ನಡೆದಿರುವುದು ಅವರ ಗಮನಕ್ಕೆ ಬಂತು. ಪರವಾನಿಗೆ ರಹಿತವಾಗಿ ಮರಳು ಸಾಗಾಟ ದಂಧೆ ನಡೆಸಿದರೆ ಕಠಿನ ಕ್ರಮ ಜರಗಿಸಲು ಹಿಂದೇಟು ಹಾಕುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ. ಕಂದಾಯ ನಿರೀಕ್ಷಕ ಜಯವಿಕ್ರಮ್‌, ಗ್ರಾಮ ಕರಣಿಕರಾದ ಸುನೀಲ್‌ ವಿಟ್ಲ ಅವರು ಜತೆಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next