Advertisement

Hiriadka ಮರಳು ಸಾಗಾಟ: ಮರಳು ಸಹಿತ ಟಿಪ್ಪರ್‌ ವಶ

12:38 AM Dec 10, 2023 | Team Udayavani |

ಹೆಬ್ರಿ: ಹಿರಿಯಡಕ ಪೊಲೀಸ್‌ ಠಾಣಾ ಮುಂಭಾಗದಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಟಿಪ್ಪರ್‌ ವಾಹನದಲ್ಲಿ ಹಿರಿಯಡಕ ಜಂಕ್ಷನ್‌ನಿಂದ ಮಣಿಪಾಲ ಕಡೆಗೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದವರನ್ನು ತಡೆದು ನಿಲ್ಲಿಸಿದಾಗ ಚಾಲಕ ಪರಾರಿಯಾದ ಘಟನೆ ನಡೆದಿದೆ.

Advertisement

ಟಿಪ್ಪರ್‌ ವಾಹನವನ್ನು ಪರಿಶೀಲಿಸಿದಾಗ ಸುಮಾರು 12 ಸಾವಿರ ರೂ. ಮರಳನ್ನು ಯಾವುದೇ ಪರವಾನಿಗೆ ಇಲ್ಲದೇ ಕಳ್ಳತನ ಮಾಡಿ ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು ವಾಹನ ಸಹಿತ ವಶಪಡಿಸಿಕೊಂಡು ಹಿರಿಯಡಕ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಆತ್ರಾಡಿ: ಜುಗಾರಿ ಆಟ; ಬಂಧನ
ಹೆಬ್ರಿ: ಆತ್ರಾಡಿ ಸಂತೆ ಮಾರ್ಕೆಟ್‌ ಬಳಿ ಸಾರ್ವಜನಿಕ ಸ್ಥಳ ದಲ್ಲಿ ಹಣವನ್ನು ಪಣವನ್ನಾಗಿಟ್ಟು ಅಂದರ್‌ ಬಾಹರ್‌ ಇಸ್ಪೀಟ್‌ ಜುಗಾರಿ ಆಟ ಆಡುತ್ತಿರುವ ಸ್ಥಳಕ್ಕೆ ಹಿರಿಯಡಕ ಪೊಲೀಸರು ದಾಳಿ ನಡೆಸಿ ಆರೋಪಿಗಳಾದ ಸಚಿನ್‌ ಮತ್ತು ರಾಘವೇಂದ್ರ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next