Advertisement

ಕೊಣಾಜೆ: ಮರಳು ಸಾಗಾಟದ ಲಾರಿ ಖಾಸಗಿ ಬಸ್ ಗೆ ಢಿಕ್ಕಿ

09:40 AM Sep 20, 2019 | keerthan |

ಉಳ್ಳಾಲ:  ಮರಳು ಸಾಗಾಟದ ಲಾರಿ ಖಾಸಗಿ ಬಸ್ ಗೆ ಢಿಕ್ಕಿ ಹೊಡೆದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಕಲ್ಕಟ್ಟ ಎಂಬಲ್ಲಿ ಗುರುವಾರ ಮುಂಜಾನೆ ಸಂಭವಿಸಿದೆ‌ .

Advertisement

ಘಟನೆಯಲ್ಲಿ ಬಸ್ ನಲ್ಲಿದ್ದವರು ಸಣ್ಣ ಪುಟ್ಟ ಗಾಯಗೊಂಡಿದ್ದು, ಕೆಲಕಾಲ ರಸ್ತೆ ಸಂಚಾರ ಅಡ್ಡಿಯಾಗಿದೆ.

ತೌಡುಗೋಳಿಯಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ವಿರುದ್ದ ದಿಕ್ಕಿನಿಂದ ಹರೇಕಳ ಕಡೆಯಿಂದ  ಕೇರಳ ಕಡೆಗೆ ಮರಳು ಸಾಗಾಟ ನಡೆಸುತ್ತಿದ್ದ ಲಾರಿ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬೆಳಗ್ಗಿನ ಸಮಯವಾದ್ದರಿಂದ ಬಸ್ಸಿನಲ್ಲಿ ಪ್ರಯಾಣಿಕರು ಹೆಚ್ಚಿದ್ದು, ವಿದ್ಯಾರ್ಥಿಗಳು ತುಂಬಿದ್ದರು.

ಆದರೆ ಪವಾಡಸದೃಶ ರೀತಿಯಲ್ಲಿ  ಚಾಲಕ ಹಾಗೂ ಎದುರಿನ ಸೀಟಿನಲ್ಲಿದ್ದ ಪ್ರಯಾಣಿಕರಿಬ್ಬರಿಗೆ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.  ಘಟನೆಯಿಂದಾಗಿ ನಾಟೆಕಲ್ ಮಂಜನಾಡಿ ರಸ್ತೆಯಲ್ಲಿ ಅರ್ಧ ಗಂಟೆಯ ಕಾಲ ರಸ್ತೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ.


ಘಟನಾ ಸ್ಥಳಕ್ಕೆ ಮಂಗಳೂರು ಸಂಚಾರಿ ಪೊಲೀಸರು ಹಾಗೂ ಕೊಣಾಜೆ ಪೊಲೀಸರು ಆಗಮಿಸಿ ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಮರಳು ಲಾರಿಗಳ ಚಾಲನೆಯಿಂದ ಈ ಭಾಗದಲ್ಲಿ ಹಲವು ಅಪಘಾತಗಳು ಸಂಭವಿಸುತ್ತಿದ್ದು, ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜನರು ಆಗ್ರಹಿಸಿದರು.

Advertisement

Advertisement

Udayavani is now on Telegram. Click here to join our channel and stay updated with the latest news.

Next