Advertisement

ಕೊಣಾಜೆ ಕಂಬ್ಲಪದವು ಗುಳಿಗ ದೈವದ ಕಟ್ಟೆಯಲ್ಲಿ ‘ಚಪ್ಪಲಿ’ ಪತ್ತೆ!

10:48 AM Apr 06, 2021 | Team Udayavani |

ಉಳ್ಳಾಲ: ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ದುಷ್ಕರ್ಮಿಗಳು ವಿಕೃತಿ ಮೆರೆದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕಂಬ್ಲಪದವಿನಲ್ಲಿ ನಡೆದಿದೆ.

Advertisement

ಮುಚ್ಚಿರಕಲ್ಲು ಗುಳಿಗ ಸಾನಿಧ್ಯದಲ್ಲಿ ಸೋಮವಾರ ತಡರಾತ್ರಿ ಪ್ರಕರಣ ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಕಾಸರಗೋಡು ನೆಟ್‌ವರ್ಕ್‌ ಡ್ರಗ್ಸ್‌ ದಂಧೆ : ಬೃಹತ್‌ ಜಾಲ ಭೇದಿಸಿದ ಎನ್‌ಸಿಬಿ

ಮುಚ್ಚಿರಕಲ್ಲು ಗುಳಿಗ ಸಾನಿಧ್ಯವು ಅತೀ ಕಾರಣೀಕ ಕ್ಷೇತ್ರವಾಗಿದ್ದು, ಎಲ್ಲಾ ಧರ್ಮೀಯರು ಭಕ್ತಿಯಿಂದ ನಮಿಸಿಕೊಂಡು ಬಂದಿದ್ದಾರೆ. ಎಲ್ಲರಿಂದಲೂ ಕೋಮು ಸಾಮರಸ್ಯದ ಪ್ರತೀಕವಾಗಿ ಗುಳಿಗನ ಆರಾಧನೆ ನಡೆದುಕೊಂಡು ಬಂದಿತ್ತು.

ಮುಚ್ಚಿರ ಕಲ್ಲು ಕ್ಷೇತ್ರದ ಸಮಿತಿಯ ಮುಖಂಡರು ಕೊಣಾಜೆ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement

ಇದನ್ನೂ ಓದಿ: ತಿಂಗಳ ಅಂತ್ಯಕ್ಕೆ ಹೊಸ ಮರಳು ನೀತಿ ಜಾರಿ : ಸಚಿವ ನಿರಾಣಿ ಘೋಷಣೆ

Advertisement

Udayavani is now on Telegram. Click here to join our channel and stay updated with the latest news.

Next