Advertisement

MUDA Scam: ಸಿಎಂ ಸಿದ್ದರಾಮಯ್ಯಗೆ ಕಪ್ಪು ‌ಚುಕ್ಕೆ… ಸಿಬಿಐ ತನಿಖೆಗೆ ವಹಿಸಿ: ನಟ ಚೇತನ್

12:01 PM Jul 15, 2024 | Team Udayavani |

ಚಿಕ್ಕಬಳ್ಳಾಪುರ: ಮೈಸೂರು ಮೂಡಾ ಹಗರಣ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಚುಕ್ಕೆ ಎಂದು ನಟ ಚೇತನ್ ಆರೋಪಿಸಿದರು.

Advertisement

ನಗರದಲ್ಲಿ ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮೂಡಾ ಹಗರಣ ತನಿಖೆಗೆ ಸರ್ಕಾರ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ರಚಿಸಿರುವ ಏಕ ಸದಸ್ಯ ವಿಚಾರಣೆ ಆಯೋಗ ಸಾಲದು ಎಂದರು.

ಕೂಡಲೇ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದರು. ರಾಜ್ಯದಲ್ಲಿ ಎಸ್,ಸಿ ಎಸ್ ಟಿ ಹಾಗೂ ಆದಿವಾಸಿಗಳಿಗೆ‌ ಮೀಸಲಿಟ್ಟ ಅನುದಾನವನ್ನು ದುರ್ಬಳಕೆ ಮಾಡಿಕೊಂಡಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ ಅವರು, ಮುಖ್ಯಮಂತ್ರಿ ಸಿದ್ದ ರಾಮಯ್ಯ ಅವರು, ಕುರಿಗಾಯಿಗಳಿಗೆ ಗನ್ ನೀಡಲು ಮುಂದಾಗಿರುವ ಕ್ರಮ ಖಂಡಿಸಿದ ಚೇತನ , ಅರಣ್ಯ ಪ್ರದೇಶವನ್ನು ಕುರಿಗಾಯಿಗಳಿಗೆ ಮೀಸಲು ಇಡಬೇಕೆಂಬ ಚಿಂತನೆ ನಡೆಸಿರುವ ಸಿದ್ದರಾಮಯ್ಯ ಕ್ರಮವನ್ನು ಖಂಡಿಸಿದರು. ಇದೇ ವೇಳೆ ವಿಧಾನಸೌಧ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಮೌಢ್ಯದ ಪ್ರತೀಕ ಎಂದು ನಟ ಚೇತನ್ ಖಂಡಿಸಿದರು.

ಈ ವೇಳೆ ಹೈಕೋರ್ಟ್ ನ್ಯಾಯವಾದಿ ಪ್ರೊ.ಎ.ಹರಿರಾಮ್ ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ: Bridge: ಇದಕ್ಕೆ ಏನ್ ಹೇಳೋಣ… ಸೇತುವೆ ನಿರ್ಮಾಣ ಆದರೂ ಜೀವಕ್ಕೆ ಮಾತ್ರ ಅಪಾಯ ತಪ್ಪಿಲ್ಲ…

Advertisement
Advertisement

Udayavani is now on Telegram. Click here to join our channel and stay updated with the latest news.

Next