Advertisement

ದರ್ಶನ್ ಅವರಿಂದ ಹಲ್ಲೆ ಆರೋಪ : ಹೊಟೇಲ್ ಗೆ ಭೇಟಿ ನೀಡಿದ ಪೊಲೀಸ್

01:18 PM Jul 16, 2021 | Team Udayavani |

ಮೈಸೂರ : ನಟ ದರ್ಶನ್ ಅವರಿಂದ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರು ಮೈಸೂರಿನ ಸಂದೇಶ ಪ್ರಿನ್ಸ್ ಹೊಟೇಲ್ ಗೆ ಭೇಟಿ ನೀಡಿದ ಪರಿಶೀಲನೆ  ನಡೆಸಿದರು.

Advertisement

ಸಂದೇಶ ಪ್ರಿನ್ಸ್ ಹೊಟೇಲ್ ಸಿಬ್ಬಂದಿ ಮೇಲೆ ಹಲ್ಲೆ ನಟ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ. ಈ ಹಿನ್ನೆಲೆ ಇಂದು  ( ಜುಲೈ 16) ಉಪ ವಿಭಾಗದ ಎಸಿಪಿ ಶಶಿಧರ್ ನೇತೃತ್ವದಲ್ಲಿ ಪೊಲೀಸರು ಅಲ್ಲಿನ ಸ್ಥಳಗಳನ್ನು ಪರಿಶೀಲಿಸಿದ್ದಾರೆ.  ಸಿಸಿಟಿವಿ ದೃಶ್ಯಾವಳಿಗಳ ಬಗ್ಗೆ ಹೊಟೇಲ್ ಮಾಲೀಕ ಸಂದೇಶ್ ನಾಗರಾಜ್ ಅವರಿಂದ ಮಾಹಿತಿ ಕಲೆ ಹಾಕಿದ್ದಾರೆ.  ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿರುವ ಗಂಗಾಧರ್ ಅವರನ್ನು ಸಹ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸದ್ಯ ಈಗ ನಟ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿಯೇ ಇದ್ದಾರೆ. ಕೋವಿಡ್-19 ನಿರ್ಬಂಧ ಹಿನ್ನೆಲೆಯಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅವರಿಗೆ ಸಹ ಇಂದು ದರ್ಶನ ಸಿಗಲಿಲ್ಲ. ಇಂದು ಮಧ್ಯಾಹ್ನ ನಂತರ ಅವರು ಸುದ್ದಿಗೋಷ್ಠಿ ನಡೆಸಲಿದ್ದಾರೆಯೇ ಎಂಬ ಕುತೂಹಲ ಕೆರಳಿದೆ.

ಗೃಹ ಸಚಿವರಿಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ನಿನ್ನೆ ಮನವಿ ಮಾಡಿದ ಹಿನ್ನೆಲೆ ಗೃಹ ಸಚಿವರು ವಿಷಯ ಬಗ್ಗೆ ತನಿಖೆ ನಡೆಸುವಂತೆ ಮೈಸೂರು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದರು. ಹೀಗಾಗಿ ಹೋಟೆಲ್‌ಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next