Advertisement

ಗುಡ್‌ ನ್ಯೂಸ್ ಚಿತ್ರರಂಗಕ್ಕೆ‌ ಸ್ಯಾಂಡಲ್‌ ವುಡ್‌ ಕ್ವೀನ್ ರಮ್ಯಾ ಕಂಬ್ಯಾಕ್‌ ಆದರೆ ಈ ಬಾರಿ…

11:33 AM Aug 31, 2022 | Team Udayavani |

ಬೆಂಗಳೂರು: ಸ್ಯಾಂಡಲ್‌ ವುಡ್‌ ಕ್ವೀನ್‌ ರಮ್ಯಾ ನಿನ್ನೆ ಹೇಳಿದ್ದ ಸಿಹಿ ಸುದ್ದಿ ಇಂದು (ಆ.31 ರಂದು) ರಿವೀಲ್‌ ಆಗಿದೆ. ಈ ವಿಚಾರ ತಿಳಿದು ಅಭಿಮಾನಿಗಳು ಫುಲ್‌ ಖುಷ್‌ ಆಗಿದ್ದಾರೆ.

Advertisement

ಬಹು ಸಮಯದಿಂದ ನಟಿ ರಮ್ಯಾ ಬಣ್ಣದ ಲೋಕದಿಂದ ದೂರ ಉಳಿದಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಚಿತ್ರರಂಗದ ಸ್ನೇಹಿತರೊಂದಿಗೆ ಆತ್ಮೀಯವಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಹೊಸ ತಂಡದ ಚಿತ್ರಗಳನ್ನು ಬೆಂಬಲಿಸಿ, ಆಗಾಗ ಸೋಶಿಯಲ್‌ ಮೀಡಿಯಾದಲ್ಲಿ ಅವರು, ಪೋಸ್ಟ್‌ ಹಾಕುತ್ತಲೇ ಇರುತ್ತಾರೆ.

ಕಳೆದ ಕೆಲ ದಿನಗಳ ಹಿಂದೆ, ಅವರು “ಹೊಯ್ಸಳ” ಚಿತ್ರ ತಂಡದ ಸೆಟ್‌ ಗೆ ಭೇಟಿ ನೀಡಿದ್ದರು. ರಾಜ್.‌ ಬಿ.ಶೆಟ್ಟಿ ಅವರೊಂದಿಗೆ ಚಿತ್ರ ಮಾಡಲಿದ್ದಾರೆ ಎನ್ನುವ ಸುದ್ದಿಯೊಂದು ಕಾಡ್ಗಿಚ್ಚಿನಂತೆ ಹಬ್ಬಿತ್ತು. ಕಂಬ್ಯಾಕ್‌ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿ ಬರುತ್ತಲೇ ಇರುವಾಗ ಅವರು ನಿನ್ನೆ ಪೋಸ್ಟ್‌ ವೊಂದನ್ನು ಹಾಕಿ ಗಣೇಶ ಹಬ್ಬದಂದು ಸಿಹಿ ಸುದ್ದಿ ಹಂಚಿಕೊಳ್ಳಲಿದ್ದೇನೆ ಎಂದು ಹೇಳಿದ್ದರು.

ಇಂದು ಮೋಹಕ ತಾರೆ, ಆ ಸುದ್ದಿಯನ್ನು ರಿವೀಲ್‌ ಮಾಡಿದ್ದಾರೆ. ಗಣೇಶ ಹಬ್ಬದ ಶುಭಾಶಯವನ್ನು ಕೇಳಿ, ನಾನು ಮತ್ತೆ ಚಿತ್ರರಂಗಕ್ಕೆ ಹಿಂತಿರುಗುತ್ತಿದ್ದೇನೆ. ಆದರೆ ಈ ಬಾರಿ ನನ್ನ ನಿರ್ಮಾಣ ಸಂಸ್ಥೆ, ಆ್ಯಪಲ್‌ ಬಾಕ್ಸ್‌ ಮೂಲಕ ನಿರ್ಮಾಪಕಿಯಾಗಲಿದ್ದೇನೆ ಎನ್ನುವುದು ವಿಶೇಷ.

ಏನಿದು ಆ್ಯಪಲ್‌ ಬಾಕ್ಸ್‌ ಅದೊಂದು ಸಾಧಾರಣವಾದ ಅಷ್ಟೇ ಉಪಯುಕ್ತವಾದ ಪುಟ್ಟ ಮರದ ಪೆಟ್ಟಿಗೆ. ನನ್ನ ಚಿತ್ರರಂಗದ ಪಯಣದುದ್ದಕ್ಕೂ ನಿರಂತರವಾಗಿ ಆ್ಯಪಲ್‌ ಬಾಕ್ಸ್‌ ಜೊತೆಗಿದೆ. ಸೆಟ್‌ ನಲ್ಲಿ ಕುರ್ಚಿಗಳಿಲ್ಲದೇ ಇದ್ದಾಗ ಅಥವಾ ಕ್ಯಾಮರಾ, ಇಲ್ಲವೇ ನಟರ ಎತ್ತರ ಹೆಚ್ಚಿಸಬೇಕದಾಗ ಈ ಆ್ಯಪಲ್‌ ಬಾಕ್ಸ್‌ ನೆರವಿಗೆ ಬಂದಿದೆ. ಈ ಪೆಟ್ಟಿಗೆಯ ಸರಳತೆ ನನಗೆ ಸ್ಪೂರ್ತಿಯಾಗಿ ಪ್ರೇರೇಪಿಸಿದೆ ಎಂದು ಹೇಳಿದ್ದಾರೆ.

Advertisement

ಪ್ರಸುತ್ತ  ಆ್ಯಪಲ್‌ ಬಾಕ್ಸ್‌ ಎರಡು ಚಿತ್ರಗಳನ್ನು ನಿರ್ಮಿಸಲು ಸಜ್ಜಾಗಿದೆ ಎಂದು ಹೇಳುವಲ್ಲಿ ನನಗೆ ಸಂತಸವಿದೆ. ಈ ಎರಡೂ ಚಿತ್ರಗಳು ಕೆ.ಆರ್.ಜಿ. ಸಂಸ್ಥೆಯ ವಿತರಣೆಯ ಮೂಲಕ ಚಿತ್ರಮಂದಿರಗಳಲ್ಲಿ ತೆರೆ ಕಾಣಲಿದೆ. ಅದರ ಜೊತೆಯಲ್ಲೇ ಓಟಿಟಿ ಫ್ಲ್ಯಾಟ್‌ ಫಾರಂಗಳಿಗಾಗಿ ಸಿನಿಮಾ ಹಾಗೂ ವೆಬ್‌ ಸಿರೀಸ್‌ ನಿರ್ಮಾಣ ಮಾಡಲು ಆ್ಯಪಲ್‌ ಬಾಕ್ಸ್‌ ಸ್ಟುಡಿಯೋಸ್‌ ಸಿದ್ದವಾಗುತ್ತಿದೆ ಎಂದಿದ್ದಾರೆ.

ಈ ಬಗ್ಗೆ ಮತ್ತಷ್ಟು ವಿವರಗಳನ್ನು ಆ್ಯಪಲ್‌ ಬಾಕ್ಸ್‌ ನ ಸಾಮಾಜಿಕ ಜಾಲತಾಣಗಳಲ್ಲಿ ನಿರೀಕ್ಷಿಸಿ.

ನನ್ನೆಲ್ಲಾ ಪ್ರಯತ್ನಗಳಲ್ಲೂ ನಿರಂತರವಾಗಿ ಜೊತೆಗಿರುವ ನನ್ನ ಕುಟುಂಬ, ಸ್ನೇಹಿತರು ಹಿತೈಷಿಗಳು, ಸಿನಿಮಾವರ್ಗದವರು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ನನ್ನ ಪ್ರೀತಿಯ ಅಭಿಮಾನಿಗಳಿಗೆ ಹೃತ್ಪೂರ್ವಕ ವಂದನೆಗಳು. ನಿಮ್ಮೆಲ್ಲರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಬೆಲೆ ಕಟ್ಟಲಾಗದ್ದು.

ಇದೇ ವೇಳೆ ವಿಜಯ್‌ ಕಿರಂಗಂದೂರ್‌,ಜಯಣ್ಣ, ಯೋಗಿ ಜಿ ರಾಜ್‌ ಮತ್ತು ಕಾರ್ತಿಕ್‌ ಗೌಡ ಇವರಿಗೂ ವಿಶೇಷ ಧನ್ಯವಾದಗಳನ್ನು ತಿಳಿಸಿದ್ದಾರೆ.

 

 

Advertisement

Udayavani is now on Telegram. Click here to join our channel and stay updated with the latest news.

Next