Advertisement

ಸಂದೀಪ್‌ ಪಾಟೀಲ್‌ ಅಧಿಕಾರ ಸ್ವೀಕಾರ

12:30 AM Feb 23, 2019 | |

ಮಂಗಳೂರು: ನಗರದ ನೂತನ ಪೊಲೀಸ್‌ ಆಯುಕ್ತರಾಗಿ ಸಂದೀಪ್‌ ಪಾಟೀಲ್‌ ಅವರು ಶುಕ್ರವಾರ ನಿರ್ಗಮನ ಕಮಿಷನರ್‌ ಟಿ.ಆರ್‌. ಸುರೇಶ್‌ ಅವರಿಂದ ಅಧಿಕಾರ ಸ್ವೀಕರಿಸಿದರು.

Advertisement

ಅಧಿಕಾರ ಸ್ವೀಕರಿಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ನೂತನ ಕಮಿಷನರ್‌ ಸಂದೀಪ್‌, ಇದೊಂದು ಬಹಳ ಜವಾಬ್ದಾರಿಯ ಹುದ್ದೆಯಾಗಿದ್ದು, ಜನರ ನಿರೀಕ್ಷೆಗೆ ತಕ್ಕಂತೆ ಕರ್ತವ್ಯ ನಿರ್ವಹಿಸುತ್ತೇನೆ. ಈ ಹಿಂದಿನ ಅಧಿಕಾರಿಗಳು ಮಾಡಿದ ಉತ್ತಮ ಕಾರ್ಯವನ್ನು ಮುಂದುವರಿಸಲಾಗುವುದು ಎಂದರು.

ನಗರದಲ್ಲಿ ಶಾಂತಿ ಸುವ್ಯವಸ್ಥೆ, ಟ್ರಾಫಿಕ್‌ ಸಮಸ್ಯೆ, ಮಹಿಳಾ ಸುರಕ್ಷೆ, ಡ್ರಗ್ಸ್‌ ಹಾವಳಿ ಬಗ್ಗೆ ಮಾಹಿತಿ ಪಡೆದು ಮುಂದಿನ ದಿನಗಳಲ್ಲಿ ಕಾರ್ಯಾಚರಣೆ ನಡೆಸಲಾಗುವುದು. ಲೋಕಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ನಿಟ್ಟಿನಲ್ಲಿ ರೂಪುರೇಷೆ ರೂಪಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next