Advertisement

ಕೋವಿಡ್ ವಾರಿಯರ್ಸ್‌ಗಳಿಗೆ ಸನ್ಮಾನ

05:36 PM May 02, 2020 | Naveen |

ಸಂಡೂರು: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಬಡ ಕಾರ್ಮಿಕರು, ಪೌರ ಕಾರ್ಮಿಕರು, ಆಶಾ ಕಾರ್ಯಕರ್ತೆಯರು ಕೊರೊನಾ ಓಡಿಸಲು ನಿರಂತರ ಶ್ರಮಿಸುತ್ತಿದ್ದಾರೆ. ಅಂತಹ ಶ್ರಮಿಕರಿಗೆ ಬೆಂಬಲಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಶಾಸಕ ಈ.ತುಕರಾಂ ಹೇಳಿದರು.

Advertisement

ತಾಲೂಕಿನ ಕುರೇಕುಪ್ಪ ಪುರಸಭೆ ಸದಸ್ಯರ ನೇತೃತ್ವದಲ್ಲಿ ಬಡ ಕಾರ್ಮಿಕರಿಗೆ, ಪೊಲೀಸ್‌, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರಿಗೆ ಪ್ರೋತ್ಸಾಹ ತುಂಬುವ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸಂಡೂರು ತಾಲೂಕಿನಾದ್ಯಂತ ಬಹಳಷ್ಟು ಸಾರ್ವಜನಿಕರು, ಜನಪ್ರತಿನಿಧಿ ಗಳು ಮುಂದೆ ಬಂದು ಕೊರೊನಾ ವಾರಿರ್ಯಸ್‌ಗೆ ಬೆಂಬಲ ನೀಡುತ್ತಿದ್ದಾರೆ. ಎಲ್ಲಿಯೂ ಸಹ ಅವರ ಕಾರ್ಯಕ್ಕೆ ಅಡ್ಡಿಯಾಗಲಿ, ತೊಂದರೆಯಾಗಲಿ ನೀಡದೆ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿಯೊಬ್ಬರೂ ಸಹ ಮುಂದೆ ಬಂದು ಬಡವರಿಗೆ ಉಚಿತ ಆಹಾರ ಧಾನ್ಯ ವಿತರಿಸಬೇಕು ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಿ.ಎಸ್‌. ಮಹಮ್ಮದ್‌ ರಫಿ, ಮಾಜಿ ವಿಧಾನ ಪರಿಷತ್‌ ಸದಸ್ಯ ಕೆ.ಎಸ್‌. ಎಲ್‌. ಸ್ವಾಮಿ, ಎಸ್‌. ಕೆ. ಭಾಷಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಏಕಾಂಬ್ರಪ್ಪ, ಕೊರೊನಾ ವಾರಿಯರ್ಸ್‌ ಆದ ಪೊಲೀಸ್‌, ಆಶಾ ಕಾರ್ಯಕರ್ತೆಯರು, ಪೌರ ಕಾರ್ಮಿಕರು, ಆಟೋ ಚಾಲಕರನ್ನು ಗೌರವಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next