Advertisement

ಸಂಗಮ್‌ ಜಂಕ್ಷನ್‌ : ಸುಗಮ ಸಂಚಾರಕ್ಕೆ ವ್ಯವಸ್ಥೆ

10:33 PM May 22, 2019 | Team Udayavani |

ಕುಂದಾಪುರ: ಬೈಂದೂರು – ಕುಂದಾಪುರ ರಾ.ಹೆದ್ದಾರಿ 66 ರ ಸಂಗಮ್‌ ಜಂಕ್ಷನ್‌ ಬಳಿಯ ವಾಹನ ಸಂಚಾರದಲ್ಲಿ ಉಂಟಾಗುತ್ತಿದ್ದ ಗೊಂದಲವನ್ನು ಮನಗಂಡು, ಸುಗಮ ವಾಹನ ಸಂಚಾರ ವ್ಯವಸ್ಥೆ ನೋಡಿಕೊಳ್ಳಲು ಬುಧವಾರ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿದೆ.

Advertisement

ಇಲ್ಲಿ ವಾಹನ ಸವಾರರಿಗೆ, ಪಾದಚಾರಿಗಳಿಗೆ ರಸ್ತೆ ಕ್ರಾಸ್‌ ಮಾಡುವುದು ದೊಡ್ಡ ಸವಾಲಾಗಿದ್ದು, ಈ ಕುರಿತಂತೆ “ಉದಯವಾಣಿ’ಯು ನಿರಂತರವಾಗಿ ವರದಿ ಮೂಲಕ ಗಮನ ಸೆಳೆಯುತ್ತಿತ್ತು.

ಇದಕ್ಕೆ ಸ್ಪಂದಿಸಿದ ಪೊಲೀಸ್‌ ಇಲಾಖೆ ತಾತ್ಕಲಿಕವಾಗಿ ಇಲ್ಲಿ ಓರ್ವ ಪೊಲೀಸ್‌ ಸಿಬಂದಿಯನ್ನು ನಿಯೋಜಿಸುವ ಮೂಲಕ ಕ್ರಮಕೈಗೊಂಡಿದೆ.

ಕುಂದಾಪುರ ಡಿವೈಎಸ್‌ಪಿ ಬಿ.ಪಿ. ದಿನೇಶ್‌ ಕುಮಾರ್‌ ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿದ್ದು, ಕಳೆದೆರಡು ದಿನಗಳಿಂದ ಇಲ್ಲಿಗೆ ಭೇಟಿ ನೀಡಿ, ಅಲ್ಲಿನ ವಸ್ತು ಸ್ಥಿತಿಯನ್ನು ಪರಿಶೀಲಿಸಿದರು.

ಮಂಗಳವಾರ ಕುಂದಾಪುರ ಉಪ ವಿಭಾಗದ ಸಹಾಯಕ ಆಯುಕ್ತ ಡಾ| ಮಧುಕೇಶ್ವರ್‌ ಕೂಡ ಭೇಟಿ ನೀಡಿ, ಸೂಕ್ತ ಸಲಹೆ ನೀಡಿದ್ದರು.

Advertisement

ಈ ಬಗ್ಗೆ ಪುರಸಭೆ ಸದಸ್ಯ ಸಂತೋಷ್‌ ಕುಮಾರ್‌ ಶೆಟ್ಟಿ ಅವರು ಕೂಡ ಡಿವೈಎಸ್‌ಪಿ ಅವರಿಗೆ ಮನವಿ ಸಲ್ಲಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next