Advertisement

ಶಿಕಾರಿಪುರ:ಸಂಗೊಳ್ಳಿ ರಾಯಣ್ಣ ಪುತ್ಥಳಿ ರಾತ್ರೋರಾತ್ರಿ ತೆರವು,ಅಭಿಮಾನಿಯಿಂದ ಆತ್ಮಹತ್ಯೆ ಯತ್ನ

10:30 AM Aug 14, 2021 | Team Udayavani |

ಶಿವಮೊಗ್ಗ: ಆಗಸ್ಟ್ 19ರಂದು ಉದ್ಘಾಟನೆ ಮಾಡಲು ಉದ್ದೇಶಿಸಿದ್ದ ಶಿಕಾರಿಪುರದ ಸಂಗೊಳ್ಳಿ ರಾಯಣ್ಣನ ಪುತ್ಥಳಿಯನ್ನು ರಾತ್ರೋ ರಾತ್ರಿ ತೆರವು ಮಾಡಲಾಗಿದೆ. ಘಟನೆಯಿಂದ ನೊಂದ ಅಭಿಮಾನಿಯೊಬ್ಬ ಚಾಕುವಿನಿಂದ‌ ಚುಚ್ಚಿಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆಯೂ ಇಂದು ಬೆಳಗ್ಗೆ ನಡೆದಿದೆ.

Advertisement

ಶಿಕಾರಿಪುರದ ಎಸ್.ಎಸ್ ರಸ್ತೆ ಪಕ್ಕದಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿತ್ತು. ಇದೇ‌ ತಿಂಗಳ 19ರಂದು ಕುರುಬ ಸಮಾಜದ ಶ್ರೀನಿರಂಜನಾನಂದಪುರಿ ಸ್ವಾಮೀಜಿ ಸೇರಿದಂತೆ ವಿವಿಧ ಸ್ವಾಮೀಜಿಗಳ ಸಮ್ಮುಖದಲ್ಲಿ ಪುತ್ಥಳಿ ಅನಾವರಣಕ್ಕೆ ತೀರ್ಮಾನಿಸಲಾಗಿತ್ತು. ಈ‌ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಹಂಚಲಾಗಿತ್ತು.

ಇದನ್ನೂ ಓದಿ:ಸೌದಿ ದೊರೆಯ ವಿರುದ್ಧ ಪೋಸ್ಟ್ ಪ್ರಕರಣ: ಆ.18ಕ್ಕೆ ಬೆಂಗಳೂರಿಗೆ ಬರಲಿದ್ದಾರೆ ಹರೀಶ್ ಬಂಗೇರ

ಆದರೆ ನಿನ್ನೆ ರಾತ್ರಿ ತಹಶೀಲ್ದಾರ್ ಕವಿರಾಜ್ ಹಾಗೂ ಪುರಸಭೆ ಮುಖ್ಯಾಧಿಕಾರಿ ಸುರೇಶ್ ಅವರು ಪೊಲೀಸ್ ಭದ್ರತೆಯಲ್ಲಿ ಪುತ್ಥಳಿಯನ್ನು ತೆರವುಗೊಳಿಸಿದ್ದಾರೆ ಎನ್ನಲಾಗಿದೆ. ತಾಲೂಕು ಅಡಳಿತದ ಕ್ರಮದಿಂದ ಆಕ್ರೋಶಗೊಂಡ ಸಂಗೊಳ್ಳಿ ರಾಯಣ್ಣ ಅಭಿಮಾನಿಗಳು ಎಸ್.ಎಸ್ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಈ ವೇಳೆ ಅಶೋಕ್ ಎಂಬಾತ ಚಾಕುವಿನಿಂದ ಚುಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾನೆ. ಕೂಡಲೇ ಸ್ಥಳದಲ್ಲಿದ್ದವರು ಆತನನ್ನು ರಕ್ಷಣೆ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next