Advertisement

ರಾಯಣ್ಣ ಪ್ರತಿಮೆ ಸ್ಥಾಪನೆ ಹೋರಾಟಗಾರರ ಮೇಲೆ ಲಾಠಿ ಪ್ರಹಾರ ಖಂಡನೀಯ : ಸಿದ್ದರಾಮಯ್ಯ

04:13 PM Aug 28, 2020 | sudhir |

ಬೆಂಗಳೂರು : ಬೆಳಗಾವಿಯ ಪೀರನವಾಡಿಯಲ್ಲಿನ ಸಂಗೊಳ್ಳಿ ರಾಯಣ್ಣ ಪ್ರತಿಮೆ‌ ಸ್ಥಾಪನೆಗಾಗಿ ಹೋರಾಟ ನಡೆಸುತ್ತಿರುವವರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೋಲೀಸರ ವರ್ತನೆ ವಿರೋಧಿಸಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಹೇಳಿಕೊಂಡಿರುವ ಸಿದ್ದರಾಮಯ್ಯ ನಾನು ಈಗಷ್ಟೆ ಅಲ್ಲಿನ ಜಿಲ್ಲಾಧಿಕಾರಿ‌ ಮತ್ತು ಪೊಲೀಸ್ ಕಮಿಷನರ್ ಜೊತೆ ಮಾತನಾಡಿ ಪರಿಸ್ಥಿತಿಯನ್ನು ಎಚ್ಚರಿಕೆಯಿಂದ ನಿಭಾಯಿಸುವಂತೆ ತಿಳಿಸಿದ್ದೇನೆ ಎಂದಿದ್ದಾರೆ.

Advertisement

ಸಂಗೊಳ್ಳಿ‌ ರಾಯಣ್ಣನ ಪ್ರತಿಮೆಸ್ಥಾಪನೆಯನ್ನು ಬಿಜೆಪಿ ಸರ್ಕಾರದ ನಿರ್ಲಕ್ಷದಿಂದ ವಿವಾದ ಮಾಡಿಕೊಂಡಿದೆ. ನೆಲ, ಜಲ, ಭಾಷೆ ಮತ್ತು ನಾಡಿನ ಹೆಮ್ಮೆಯ ವ್ಯಕ್ತಿತ್ವಗಳ ವಿಷಯದಲ್ಲಿ ರಾಜಿ ಸಲ್ಲದು. ಕನ್ನಡ ಸಂಘಟನೆಗಳು ಮತ್ತು ರಾಯಣ್ಣ ಅಭಿಮಾನಿಗಳು‌ ಕೂಡಾ ಸಂಯಮದಿಂದ ವರ್ತಿಸಿ ವಿವಾದ ಇತ್ಯರ್ಥಕ್ಕೆ ಸಹಕರಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next