Advertisement

ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಸ್ಯಾನಿಟೈಸರ್‌ ಸಿಂಪಡಣೆ

12:32 AM Mar 18, 2020 | Lakshmi GovindaRaj |

ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮವಹಿಸುವ ಉದ್ದೇಶದಿಂದ ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಪ್ರಾಯೋಗಿ ಕವಾಗಿ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಯಿತು. ಪಾಲಿಕೆಯ ಕೇಂದ್ರ ಕಚೇರಿಯ ಎಲ್ಲ ವಿಭಾಗ ಗಳ ಕಚೇರಿ, ಕಾರಿಡಾರ್‌, ಮೆಟ್ಟಿಲುಗಳು ಹಾಗೂ ಸಾರ್ವಜನಿಕರು ಹೆಚ್ಚು ಸ್ಪರ್ಶಿಸುವ ಮೆಟ್ಟಿಲಿನ ಹಿಡಿಕೆ, ಗೇಟ್‌,ಬಾಗಿಲು ಹಾಗೂ ಶೌಚಾಲಯದ ಭಾಗದಲ್ಲೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲಾಗಿದೆ.

Advertisement

ಬುಧವಾರದಿಂದ ಪಾಲಿಕೆ ವ್ಯಾಪ್ತಿಯ ಎಲ್ಲ ಕಚೇರಿಗಳು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಸ್ಯಾನಿಟೈಸರ್‌ ಸಿಂಪಡಣೆ ಮಾಡಲು ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ಸೂಚನೆ ನೀಡಿ ದ್ದಾರೆ ಎಂದು ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ.

ಥರ್ಮಲ್‌ ಸ್ಕ್ರೀನ್‌ ಅಳವಡಿಸಲು ಮನವಿ: ಪಾಲಿಕೆಯ ಕೇಂದ್ರ ಕಚೇರಿಗೆ ನಿತ್ಯ ಸಾವಿರಾರು ಜನ ಬರುವುದರಿಂದ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನಿಂಗ್‌ ಅಳವಡಿಸುವಂತೆ ಪಾಲಿಕೆಯ ಪ್ರತಿಪಕ್ಷ ನಾಯಕ ಅಬ್ದುಲ್‌ವಾಜಿದ್‌ ಮನವಿ ಮಾಡಿದ್ದಾರೆ.

ಈ ಸಂಬಂಧ ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ಅವರಿಗೆ ಪತ್ರ ಬರೆದಿದ್ದು, ಪಾಲಿಕೆಯ ಕೇಂದ್ರ ಕಚೇರಿಗೆ ನಿತ್ಯ ಸಾವಿರಾರು ಜನ ಬರುತ್ತಾರೆ. ಹೀಗಾಗಿ, ಕೊರೊನಾ ಹಬ್ಬುವ ಸಾಧ್ಯತೆ ಹೆಚ್ಚಿರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಥರ್ಮಲ್‌ ಸ್ಕ್ರೀನ್‌ ಅಳವಡಿಸುವ ಮೂಲಕ ಸೋಂಕು ತಡೆಗೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಪಾಲಿಕೆ ಕಚೇರಿಯಲ್ಲಿ ನಿರ್ದಿಷ್ಟ ವೇಳೆಯಲ್ಲಿ ಜನರಿಗೆ ಅವಕಾಶ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಪಾಲಿಕೆಯ ಕೇಂದ್ರ ಕಚೇರಿಗೆ ಅನ್ವಯವಾಗುವಂತೆ ಮಧ್ಯಾಹ್ನ 3ರಿಂದ ಸಂಜೆ 5ಗಂಟೆಯ ವರೆಗೆ ನಿಗದಿತ ವೇಳೆಯಲ್ಲಿ ಜನರಿಗೆ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಆಯುಕ್ತರಾದ ಬಿ.ಎಚ್‌.ಅನಿಲ್‌ಕುಮಾರ್‌ ತಿಳಿಸಿದ್ದಾರೆ. ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಉಳಿದ ಸಮಯ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.

Advertisement

ಸಿಎಂ ವಿರುದ್ಧ ರಾಜ್ಯಪಾಲರಿಗೆ ದೂರು: ಕೊರೊನಾ ಭೀತಿ ಹಿನ್ನೆಲೆಯಲ್ಲಿ ಹೆಚ್ಚು ಜನ ಸೇರುವ ಮದುವೆಗಳು ಸೇರಿದಂತೆ ಸಾರ್ವಜನಿಕ ಸಭೆ, ಸಮಾರಂಭಗಳನ್ನು ನಿಷೇಧಿಸಿ ತಾವೇ ಹೊರಡಿಸಿರುವ ಅಧಿಸೂಚನೆಯನ್ನು ಉಲ್ಲಂ ಸಿ ಮಾ.15ರಂದು ಬೆಳಗಾವಿಯಲ್ಲಿ ವಿಧಾನಪರಿಷತ್‌ ಸದಸ್ಯ ಮಹಾಂತೇಶ ಕವಟಗಿಮಠ ಅವರ ಮಗಳ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿರುವುದಕ್ಕೆ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ. ನರಸಿಂಹಮೂರ್ತಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸರ್ಕಾರದ ಅಧಿಸೂಚನೆ ಉಲ್ಲಂ ಸಿ ಮುಖ್ಯಮಂತ್ರಿಯವರು ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇವರ ಜೊತೆಗೆ ಕೆಲವು ಶಾಸಕರು, ಸಚಿವರು, ಕೇಂದ್ರದ ಮಂತ್ರಿಗಳು ಇದ್ದರು. ಆದ್ದರಿಂದ ಈ ನಿಟ್ಟಿನಲ್ಲಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.

ಶಂಕಿತರು ಎಸ್ಕೇಪ್‌ ಆದ್ರೆ ಕ್ರಮ: ಕೊರೊನಾ ಶಂಕಿತರು ಚಿಕಿತ್ಸೆ ಪಡೆಯದೆ ಪರಾರಿಯಾದರೆ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ತಿಳಿಸಿದ್ದಾರೆ. ಮಂಗಳವಾರ ಮಾಧ್ಯಮ ಪತ್ರಿನಿಧಿಗಳ ಜತೆ ಮಾತನಾಡಿದ ಅವರು, ಕೊರೊನಾ ಶಂಕಿತರು ಮುನ್ನೆಚ್ಚರಿಕೆ ವಹಿಸಬೇಕು.

ಸಾಮಾಜಿಕ ಜವಾಬ್ದಾರಿ ಅರಿತು ಚಿಕಿತ್ಸೆ ಪಡೆದುಕೊಳ್ಳಬೇಕೇ ವಿನ: ಪರಾರಿ ಆಗಬಾರದು. ಒಂದು ವೇಳೆ ಪರಾರಿಯಾಗುವುದು ಗೊತ್ತಾದರೆ ಕಾನೂನು ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ಡಿಸಿಪಿ ಇಶಾ ಪಂಥ್‌ ಅವರನ್ನು ನೋಡಲ್‌ ಅಧಿಕಾರಿಯನ್ನಾಗಿ ನೇಮಿಸಿದ್ದು, ಆರೋಗ್ಯ ಇಲಾಖೆ ಸೂಚನೆಯಂತೆ ಕಾರ್ಯನಿರ್ವಹಿಸಲಿದ್ದಾರೆ ಎಂದೂ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next