Advertisement

Sanjay Dutt: ‘ಕೆಡಿʼ ವಿಲನ್‌ ಗೆ ಗಾಯ; ಸುಳ್ಳು ಸುದ್ದಿಗೆ ಸ್ಪಷ್ಟನೆ ಕೊಟ್ಟ ಸಂಜು ಬಾಬಾ

10:54 AM Apr 13, 2023 | Team Udayavani |

ಮುಂಬಯಿ: ಕೆಜಿಎಫ್‌ ನಲ್ಲಿನ ಪಾತ್ರದ ಬಳಿಕ ನಟ ಸಂಜಯ್‌ ದತ್‌ ಪ್ಯಾನ್‌ ಇಂಡಿಯಾ ಸ್ಟಾರ್‌ ಆಗಿದ್ದಾರೆ. ಅವರ ರಗಡ್‌ ಲುಕ್‌ ಗಳ ಪಾತ್ರಗಳಿಗೆ ಬೇಡಿಕೆ ಹೆಚ್ಚಾಗಿದೆ. ಸ್ಯಾಂಡಲ್‌ ವುಡ್‌ ನಟ ಸಂಜಯ್‌ ದತ್‌ ಮತ್ತೊಮ್ಮೆ ಕಾಣಿಸಿಕೊಳ್ಳುತ್ತಿರುವುದು ಗೊತ್ತೇ ಇದೆ.

Advertisement

ಜೋಗಿ ಪ್ರೇಮ್‌ ನಿರ್ದೇಶನದ ʼಕೆಡಿʼ ಸಿನಿಮಾದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಬಹು ನಿರೀಕ್ಷಿತ ಬಿಗ್‌ ಬಜೆಟ್‌ ಸಿನಿಮಾಗಳಲ್ಲಿ ಒಂದಾಗಿರುವ ʼಕೆಡಿʼಯಲ್ಲಿ ಧ್ರುವ ಸರ್ಜಾ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಸಿನಿಮಾದ ಫಸ್ಟ್‌ ಲುಕ್‌ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಸಿನಿಮಾದಲ್ಲಿ ನಟಿ ಶಿಲ್ಪಾ ಶೆಟ್ಟಿ ʼ ಸತ್ಯವತಿʼ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ನಟ ಸಂಜಯ್‌ ದತ್‌ ನೆಗೆಟಿವ್‌ ಲುಕ್‌ ನಲ್ಲಿ ಬಣ್ಣ ಹಚ್ಚಲಿದ್ದಾರೆ. ಇತ್ತೀಚೆಗೆ ಚಿತ್ರೀಕರಣದ ಸಾಹಸ ದೃಶ್ಯದ ವೇಳೆ ನಟ ಸಂಜಯ್‌ ಅವರಿಗೆ ಗಾಯವಾಗಿದೆ ಎನ್ನುವ ಸುದ್ದಿಯೊಂದು ಹಬ್ಬಿತ್ತು. ತನ್ನ ನೆಚ್ಚಿನ ನಟನ ಬಗ್ಗೆ ಅಭಿಮಾನಿಗಳು ಆತಂಕ ವ್ಯಕ್ತಪಡಿಸಿದ್ದರು.

ಸುದ್ದಿ ವೈರಲ್‌ ಆಗುತ್ತಿದ್ದಂತೆ ಸ್ವತಃ ಸಂಜಯ್‌ ದತ್‌ ಅವರೇ ಈ ಬಗ್ಗೆ ಟ್ವೀಟ್‌ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ʼಕೆಡಿʼ ಚಿತ್ರೀಕರಣದ ವೇಳೆ ನನಗೆ ಗಾಯವಾಗಿದೆ ಎನ್ನುವ ಸುದ್ದಿ ಸಂಪೂರ್ಣ ಸುಳ್ಳು ಹಾಗೂ ಅರ್ಥಹೀನ. ದೇವರ ದಯೆಯಿಂದ ನಾನು ಆರೋಗ್ಯವಾಗಿದ್ದೇನೆ. ಸಿನಿಮಾ ತಂಡ ನನ್ನ ದೃಶ್ಯದ ಚಿತ್ರೀಕರಣದ ವೇಳೆ ಹೆಚ್ಚಿನ ಮುಂಜಾಗ್ರತ ಕ್ರಮವನ್ನು ಕೈಗೊಂಡಿದೆ. ನಿಮ್ಮೆಲ್ಲರ ಕಾಳಜಿಗೆ ಧನ್ಯವಾದಗಳೆಂದಿದ್ದಾರೆ.

ಇನ್ನು ಈ ಬಗ್ಗೆ ನಿರ್ದೇಶಕ ಪ್ರೇಮ್‌ ಕೂಡ ಇದೊಂದು ಸುಳ್ಳು ಸುದ್ದಿಯೆಂದು ನಟನ ಜೊತೆಗಿನ ಫೋಟೋವೊಂದನ್ನು ಹಂಚಿಕೊಂಡು ಹೇಳಿದ್ದಾರೆ.

Advertisement

ಪ್ಯಾನ್‌ ಇಂಡಿಯಾ ಸಿನಿಮಾವಾಗಿರುವ ʼಕೆಡಿʼ ಸಿನಿಮಾವನ್ನು ಕೆವಿಎನ್‌ ಪ್ರೂಡಕ್ಷನ್ಸ್‌ ನಿರ್ಮಾಣ ಮಾಡುತ್ತಿದೆ. ಅರ್ಜುನ್‌ ಜನ್ಯ ಮ್ಯೂಸಿಕ್‌ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next