Advertisement

ಗುಡ್ ನ್ಯೂಸ್: ಅಭಿಮಾನಿಗಳಿಗೆ ಸಿಹಿ ಸುದ್ದಿ ಕೊಟ್ಟ ಕೆಜಿಎಫ್-2 ಅಧೀರ “ಸಂಜಯ್ ದತ್”

06:27 PM Oct 21, 2020 | Nagendra Trasi |

ಮುಂಬೈ: ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಲಿವುಡ್ ನಟ, ಕೆಜಿಎಫ್ 2 ಚಾಪ್ಟರ್ ನ ಅಧೀರ ಪಾತ್ರಧಾರಿ ಸಂಜಯ್ ದತ್ ಬುಧವಾರ (ಅಕ್ಟೋಬರ್ 21, 2020)ಸಾಮಾಜಿಕ ಜಾಲತಾಣದಲ್ಲಿ ಖುಷಿಯ ವಿಚಾರವನ್ನು ಹಂಚಿಕೊಂಡಿದ್ದು, ತಾನು ಆರೋಗ್ಯವಂತನಾಗಿದ್ದೇನೆ ಎಂದು ತಿಳಿಸಿದ್ದಾರೆ.

Advertisement

ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿಯೇ ತನಗೆ ದೇವರು ಆರೋಗ್ಯ ಕರುಣಿಸಿದ್ದಾನೆ ಎಂದು ದತ್ ಪ್ರತಿಕ್ರಿಯೆ ವ್ಯಕ್ತಪಡಿಸಿ, ಸಾಮಾಜಿಕ ಜಾಲತಾಣದಲ್ಲಿ ಈ ಖುಷಿಯ ವಿಚಾರವನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ಸಂತಸವಾಗುತ್ತಿದೆ ಎಂದು ಹೇಳಿದ್ದಾರೆ.

“ ಕಳೆದ ಕೆಲವು ವಾರಗಳು ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾ ಕಠಿಣ ದಿನಗಳಾಗಿದ್ದವು. ಆದರೆ ದೇವರು ನನಗೆ ಕಠಿಣ ಹೋರಾಟದ ಸವಾಲನ್ನು ಒಡ್ಡಿದ್ದು, ಇಂದು ನಾನು ಅದನ್ನು ಜಯಿಸಿದ್ದೇನೆ. ಅದು ನನ್ನ ಮಕ್ಕಳ ಹುಟ್ಟುಹಬ್ಬದ ಸಂದರ್ಭದಲ್ಲಿ. ನಾನು ಗುಣಮುಖನಾಗಿರುವುದೇ ಮಕ್ಕಳಿಗೆ ನೀಡಿರುವ ಉತ್ತಮ ಕೊಡುಗೆಯಾಗಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಪಾಕಿಸ್ತಾನದಲ್ಲಿ ಗೆಲ್ಲಬೇಕಷ್ಟೆ!ಕೈ ಮುಖಂಡರಿಗೆ ಮತ್ತೆ ಸಿಎಂ ಹುದ್ದೆ ಕನಸು

ಇದು ಸಾಧ್ಯವಾಗಿದ್ದು ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ. ನಾನು ನನ್ನ ಕುಟುಂಬಕ್ಕೆ, ಗೆಳೆಯರಿಗೆ ಮತ್ತು ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸುತ್ತೇನೆ. ನಿಮ್ಮ ಅಪರಿಮಿತವಾದ ಪ್ರೀತಿ ಮತ್ತು ಅಭಿಮಾನಕ್ಕೆ ಅಭಾರಿಯಾಗಿದ್ದಾನೆ.

Advertisement

ನಾನು ಮುಖ್ಯವಾಗಿ ಕೋಕಿಲಾಬೆನ್ ಆಸ್ಪತ್ರೆಯ ಡಾ.ಸೇವಂತಿ ಹಾಗೂ ಅವರ ವೈದ್ಯರ ತಂಡಕ್ಕೆ ವಿಶೇಷ ಕೃತಜ್ಞತೆ ಸಲ್ಲಿಸುತ್ತೇನೆ. ಕಳೆದ ಕೆಲವು ವಾರಗಳಿಂದ ನನ್ನನ್ನು ತುಂಬಾ ಚೆನ್ನಾಗಿ ನೋಡಿಕೊಂಡಿದ್ದಾರೆ ಎಂದು ಟ್ವೀಟ್ ನಲ್ಲಿ ಶೇರ್ ಮಾಡಿರುವ ಪತ್ರದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next