Advertisement

ವಾಕಿಂಗ್ ವೇಳೆ ಗುಂಡಿನ ದಾಳಿ: ಉತ್ತರ ಪ್ರದೇಶದ ಬಿಜೆಪಿ ನಾಯಕನ ಹತ್ಯೆ

03:12 PM Aug 11, 2020 | keerthan |

ಲಕ್ನೋ: ಉತ್ತರ ಪ್ರದೇಶದ ಸ್ಥಳೀಯ ಬಿಜೆಪಿ ಮುಖಂಡ, ಬಾಘ್ ಪತ್ ನ ಮಾಜಿ ಜಿಲ್ಲಾಧ್ಯಕ್ಷ ಸಂಜಯ್ ಖೂಖರ್ ಅವರನ್ನು ಇಂದು ಮುಂಜಾನೆ ಹತ್ಯೆ ಮಾಡಲಾಗಿದೆ,

Advertisement

ಸಂಜಯ್ ಖೂಖರ್ ಇಂದು ಮುಂಜಾನೆ ತಮ್ಮದೇ ಜಮೀನಿನಲ್ಲಿ ವಾಕಿಂಗ್ ಗೆ ತೆರಳಿದ್ದ ವೇಳೆ ಗುಂಡಿನ ದಾಳಿ ಮಾಡಲಾಗಿದೆ. ರಕ್ತಸಿಕ್ತವಾಗಿ ಬಿದ್ದಿದ್ದ ಸಂಜಯ್ ಖೂಖರ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾದರೂ ಬದುಕುಳಿಯಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಘ್ಪತ್ ನ ಚಪ್ರುಲಿ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯಾವ ಕಾರಣಕ್ಕೆ ಹತ್ಯೆ ಮಾಡಲಾಗಿದೆ ಎನ್ನುವ ಬಗ್ಗೆ ವರದಿಯಾಗಿಲ್ಲ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಗುಂಡಿನ ಏಟು ತಿಂದು ರಕ್ತದೋಕುಳಿಯಲ್ಲಿ ಬಿದ್ದಿದ್ದ ಸಂಜಯ್ ಖೋಖರ್ ಅವರ ಫೋಟೋಗಳು ಮತ್ತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next