Advertisement

ನವೆಂಬರ್ 9 ರ ವರೆಗೆ ಸಂಜಯ್ ರಾವುತ್ ನ್ಯಾಯಾಂಗ ಬಂಧನ ವಿಸ್ತರಣೆ

04:23 PM Nov 02, 2022 | Team Udayavani |

ಮುಂಬಯಿ : ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಶಿವಸೇನಾ ಸಂಸದ ಸಂಜಯ್ ರಾವುತ್ ಅವರು ಸಲ್ಲಿಸಿರುವ ಜಾಮೀನು ಅರ್ಜಿಯ ಆದೇಶವನ್ನು ಇಲ್ಲಿನ ವಿಶೇಷ ನ್ಯಾಯಾಲಯವು ಬುಧವಾರ ಕಾಯ್ದಿರಿಸಿದ್ದು, ನವೆಂಬರ್ 9 ರಂದು ಆದೇಶವನ್ನು ಪ್ರಕಟಿಸುವುದಾಗಿ ಹೇಳಿದೆ.

Advertisement

ರಾವುತ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 9ರವರೆಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಲಾಗಿದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ)ಗೆ ಸಂಬಂಧಿಸಿದ ಪ್ರಕರಣಗಳ ವಿಚಾರಣೆಗೆ ನಿಯೋಜಿತವಾಗಿರುವ ವಿಶೇಷ ನ್ಯಾಯಾಧೀಶ ಎಂ.ಜಿ. ದೇಶಪಾಂಡೆ, ಪ್ರಕರಣದ ಸಹ ಆರೋಪಿ ಪ್ರವೀಣ್ ರಾವುತ್ ಸಲ್ಲಿಸಿರುವ ಜಾಮೀನು ಅರ್ಜಿಯ ಬಗ್ಗೆ ನವೆಂಬರ್ 9 ರಂದು ಆದೇಶವನ್ನು ಹೊರಡಿಸುವುದಾಗಿ ಹೇಳಿದರು.

ಉಪನಗರ ಗೋರೆಗಾಂವ್ ಪ್ರದೇಶದಲ್ಲಿನ ಪತ್ರಾ ಚಾಲ್ ಮರುಅಭಿವೃದ್ಧಿಗೆ ಸಂಬಂಧಿಸಿದಂತೆ ಹಣಕಾಸು ಅಕ್ರಮಗಳಲ್ಲಿ ಅವರ ಪಾತ್ರದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಈ ವರ್ಷದ ಜುಲೈನಲ್ಲಿ ರಾಜ್ಯಸಭಾ ಸದಸ್ಯ ಸಂಜಯ್ ರಾವುತ್ ಅವರನ್ನು ಬಂಧಿಸಿತ್ತು. ಅವರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ ಮತ್ತು ಸೆಂಟ್ರಲ್ ಮುಂಬೈನ ಆರ್ಥರ್ ರೋಡ್ ಜೈಲಿನಲ್ಲಿದ್ದಾರೆ. ಕಳೆದ ತಿಂಗಳು ಅವರು ಈ ಪ್ರಕರಣದಲ್ಲಿ ಜಾಮೀನು ಕೋರಿದ್ದರು, ಇದನ್ನು ಇಡಿ ವಿರೋಧಿಸಿತ್ತು.

ಇಡಿ ತನಿಖೆಯು ಪತ್ರಾ ಚಾಲ್‌ನ ಪುನರಾಭಿವೃದ್ಧಿಯಲ್ಲಿನ ಹಣಕಾಸಿನ ಅಕ್ರಮಗಳು ಮತ್ತು ಅವರ ಪತ್ನಿ ಮತ್ತು ಸಹಚರರನ್ನು ಒಳಗೊಂಡಿರುವ ಸಂಬಂಧಿತ ಹಣಕಾಸಿನ ವಹಿವಾಟುಗಳಿಗೆ ಸಂಬಂಧಿಸಿದೆ.

Advertisement

ಗೋರೆಗಾಂವ್‌ನ ಪಾತ್ರ ಚಾಲ್ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಸಿದ್ಧಾರ್ಥ್ ನಗರವು 47 ಎಕರೆಗಳಲ್ಲಿ ಹರಡಿಕೊಂಡಿದೆ ಮತ್ತು 672 ಬಾಡಿಗೆದಾರ ಕುಟುಂಬಗಳನ್ನು ಹೊಂದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next