Advertisement

20 ಸಾವಿರ ಮತಗಳಿಂದ ಬಿಜೆಪಿ ಅಭ್ಯರ್ಥಿ ಗೆಲುವು: ಮಠಂದೂರು

01:07 AM Apr 16, 2023 | Team Udayavani |

ಪುತ್ತೂರು : ಪುತ್ತೂರು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಅಭೂತಪೂರ್ವ ಕೆಲಸ ನಡೆದಿದ್ದು ಇದೇ ಆಧಾರದಲ್ಲಿ ಬಿಜೆಪಿ ಅಭ್ಯರ್ಥಿ 20 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸುವರು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು.

Advertisement

ಪಕ್ಷದ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿ, ವ್ಯಕ್ತಿಗಿಂತ ಪಕ್ಷ ದೊಡ್ಡದು, ಪಕ್ಷಕ್ಕಿಂತ ದೇಶದೊಡ್ಡದು ಎಂಬ ಸಂದೇಶ ಸಾರುವ ಕೆಲಸವನ್ನು ಕಾರ್ಯಕರ್ತರು ಮಾಡುತ್ತಿದ್ದಾರೆ. ಈಗಾಗಲೇ ಹಾಕಿಕೊಂಡ ಯೋಜನೆ ಗಳನ್ನು ಮುಂದುವರಿಸಲು ಬಿಜೆಪಿ ಅನಿವಾರ್ಯ. ಅಭಿವೃದ್ಧಿ ಕೆಲಸ ಗಳನ್ನು ಮುಂದುವರಿಸಲು ಸಮರ್ಥ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಅವರನ್ನು ಪಕ್ಷ ಆಯ್ಕೆ ಮಾಡಿದ್ದು, ಅವರ ಗೆಲುವಿಗೆ ಶ್ರಮಿಸುತ್ತೇವೆ ಎಂದರು.
ಆಶಾ ತಿಮ್ಮಪ್ಪ, ಚುನಾವಣ ನಿರ್ವ ಹಣ ಸಮಿತಿ ಅಧ್ಯಕ್ಷ ಎಸ್‌.ಅಪ್ಪಯ್ಯ ಮಣಿಯಾಣಿ, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಸಹಿತ ಹಲವು ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next