Advertisement

ಜಿಲ್ಲಾ ಉಸ್ತುವಾರಿ ಸಚಿವರ ದಿಢೀರ್‌ ದೇಗುಲ ಸಂಚಾರ

11:43 AM Apr 15, 2022 | Team Udayavani |

ಸಿಂಧನೂರು: ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಬಿ.ಪಾಟೀಲ್‌ ಮುನೇನಕೊಪ್ಪ ಅವರು ತಾಲೂಕಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ, ಅಲ್ಲಲ್ಲಿ ಸುತ್ತಾಡಿ ಗಮನ ಸೆಳೆದರು.

Advertisement

ದಿಢೀರ್‌ ನಗರಕ್ಕೆ ಆಗಮಿಸಿದ ಸಚಿವರು, ನೇರವಾಗಿ ಜೈನ್‌ ಕಲ್ಯಾಣ ಮಂಟಪಕ್ಕೆ ತೆರಳಿ ಮಹಾವೀರರ ಜಯಂತಿಯಲ್ಲಿ ಪಾಲ್ಗೊಂಡರು. ಬಳಿಕ ತಹಶೀಲ್‌ ಕಚೇರಿ ಮುಂಭಾಗಕ್ಕೆ ಆಗಮಿಸಿ, ಡಾ| ಬಿ.ಆರ್‌. ಅಂಬೇಡ್ಕರ್‌ ಭಾವಚಿತ್ರಕ್ಕೆ ನಮನ ಸಲ್ಲಿಸಿದರು. ಅಲ್ಲಿಂದ ಬಿಜೆಪಿ ಕಚೇರಿಗೆ ತೆರಳಿದರು. ಬಳಿಕ ಶ್ರೀಕ್ಷೇತ್ರ ಸಿದ್ಧಪರ್ವತ ಅಂಬಾಮಠಕ್ಕೆ ತೆರಳಿ ಅಲ್ಲಿ ಅಂಬಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ದೇವಸ್ಥಾನ ಸಮಿತಿ ಅಧ್ಯಕ್ಷ ರಾಜಶೇಖರ ಹಿರೇಮಠ, ಬಿಜೆಪಿ ಮಂಡಲ ಅಧ್ಯಕ್ಷ ಹನುಮೇಶ ಸಾಲಗುಂದಾ ಇದ್ದರು. ಯಾವುದೇ ನಿಗದಿತ ಕಾರ್ಯಕ್ರಮ ವಿಲ್ಲದ್ದರಿಂದ ಅನಿರೀಕ್ಷಿತವಾಗಿ ಸಚಿವರ ಭೇಟಿ ನೀಡಿದ ಹಿನ್ನೆಲೆಯಲ್ಲಿ ಅವರು ಎಲ್ಲಿಯೂ ಸಾರ್ವಜನಿಕವಾಗಿ ಮಾತನಾಡದೇ ನಿರ್ಗಮಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next