Advertisement

ಸಂಸ್ಕೃತ ವಿವಿ ಒಕ್ಕೂಟದ ಅಧ್ಯಕ್ಷರಾಗಿ ಪ್ರೊ.ದೇವನಾಥನ್‌

07:28 PM Oct 01, 2021 | Team Udayavani |

ಬೆಂಗಳೂರು: ಸಂಸ್ಕೃತ ವಿಶ್ವವಿದ್ಯಾಲಯಗಳ ಒಕ್ಕೂಟ(ಭಾರತದ ಎಲ್ಲ ಕೇಂದ್ರ ಹಾಗೂ ರಾಜ್ಯ ಸಂಸ್ಕೃತ ವಿಶ್ವವಿದ್ಯಾಲಯಗಳ ಒಕ್ಕೂಟ)ದ ಅಧ್ಯಕ್ಷರಾಗಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಇ.ದೇವನಾಥನ್‌ ಆಯ್ಕೆಯಾಗಿದ್ದಾರೆ.

Advertisement

ಒಕ್ಕೂಟದ ಅಧ್ಯಕ್ಷರಾಗಿದ್ದ ಪ್ರೊ.ಗೋಪಬಂಧು ಮಿಶ್ರಾ ಗುಜರಾತಿನ ಸೋಮನಾಥ ಸಂಸ್ಕೃತ ವಿಶ್ವವಿದ್ಯಾಲಯದ ಕುಲಪತಿ ಹುದ್ದೆಯಿಂದ ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ, ಒಕ್ಕೂಟದ ಅಧ್ಯಕ್ಷರ ಹುದ್ದೆಯು
ತೆರವಾಗಿತ್ತು.
ಸೆ.23ರಿಂದಲೇ ಅನ್ವಯ ಆಗುವಂತೆ ಎರಡು ವರ್ಷಗಳ ಅವಧಿಗೆ ಪ್ರೊ.ಕೆ.ಇ.ದೇವನಾಥನ್‌ ಅವರನ್ನು ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next