Advertisement

ಸಾಂತಾಕ್ರೂಜ್‌ ಬಿಲ್ಲವ ಭವನದಲ್ಲಿ 69ನೇ ಗಣರಾಜ್ಯೋತ್ಸವ 

01:13 PM Jan 31, 2018 | Team Udayavani |

ಮುಂಬಯಿ: ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ವತಿಯಿಂದ 69 ನೇ ಗಣರಾಜ್ಯೋತ್ಸವ ಆಚರಣೆಯು ಜ. 26 ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಅದ್ದೂರಿಯಾಗಿ ಜರಗಿತು.

Advertisement

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌ ಅವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಧ್ವಜಾರೋಹಣ ಮತ್ತು ಸಭಾ ಕಾರ್ಯಕ್ರಮ ನೆರವೇರಿತು.

ಗುರುನಾರಾಯಣ ರಾತ್ರಿಶಾಲೆಯ ವಿದ್ಯಾರ್ಥಿನಿಯರು ಪ್ರಾರ್ಥನೆಗೈದರು. ಅಸೋಸಿಯೇಶನ್‌ನ ಉಪಾಧ್ಯಕ್ಷ ಹಾಗೂ ಸೇವಾ ದಳದ ಕಾರ್ಯಾಧ್ಯಕ್ಷ ಶಂಕರ್‌ ಡಿ. ಪೂಜಾರಿ ಅವರು ಸ್ವಾಗತಿಸಿದರು. ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಅಸೋಸಿಯೇಶನ್‌ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ನೇತಾರ ಎಲ್‌. ವಿ. ಅಮೀನ್‌, ಹಿರಿಯರಾದ ಅಸೋಸಿಯೇಶನ್‌ನ ಮಾಜಿ ಪ್ರಧಾನ ಕೋಶಾಧಿಕಾರಿ ಎನ್‌. ಎಂ. ಸನಿಲ್‌, ಅಸೋಸಿಯೇಶನ್‌ನ ಉಪಾಧ್ಯಕ್ಷರುಗಳಾದ ಡಾ| ಯು. ಧನಂಜಯ ಕುಮಾರ್‌, ಶಂಕರ್‌ ಡಿ. ಪೂಜಾರಿ ಹಾಗೂ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಕುಂತಳಾ ಕೆ. ಕೋಟ್ಯಾನ್‌ ಅವರು ಸಂದಭೋìಚಿತವಾಗಿ ಮಾತನಾಡಿ ಶುಭಹಾರೈಸಿದರು.

ಅಸೋಸಿಯೇಶನ್‌ನ ಜತೆ ಕಾರ್ಯದರ್ಶಿ ಹರೀಶ್‌ ಜಿ. ಸಾಲ್ಯಾನ್‌ ಕಾರ್ಯಕ್ರಮ ನಿರ್ವಹಿಸಿದರು. ಜಿಒಸಿ ಗಣೇಶ್‌ ಪೂಜಾರಿ ವಂದಿಸಿದರು. ಅಸೋಸಿಯೇಶನ್‌ನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾವಿಭಾಗ, ಯುವ ವಿಭಾಗ, ವಿವಿಧ ಸ್ಥಳೀಯ ಸಮಿತಿಗಳ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ವಿವಿಧ ಉಪವಿಭಾಗಗಳ ಪದಾಧಿಕಾರಿಗಳು, ಗುರುನಾರಾಯಣ ರಾತ್ರಿಶಾಲೆಯ ವಿದ್ಯಾರ್ಥಿಗಳು,  ಶಿಕ್ಷಕವೃಂದ, ಶಿಕ್ಷಕೇತರ ಸಿಬಂದಿಗಳು, ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next