Advertisement

ಸಪ್ತಪದಿ ಪ್ರಚಾರ ರಥಕ್ಕೆ ಚಾಲನೆ

06:11 PM Feb 24, 2020 | Suhan S |

ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ವಿನೂತನ ಸಪ್ತಪದಿ ಯೋಜನೆಯ ಪ್ರಚಾರದ ಸಲುವಾಗಿ ತಾಲೂಕಿನ ಎಸ್‌.ಎಸ್‌ ಘಾಟಿ ಕ್ಷೇತ್ರದ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಸಮೀಪ ಸಪ್ತಪದಿ ರಥಕ್ಕೆ ದೇವನಹಳ್ಳಿ ಶಾಸಕ ನಿಸರ್ಗ ನಾರಾಯಣಸ್ವಾಮಿ ಚಾಲನೆ ನೀಡಿದರು.

Advertisement

ಈ ವೇಳೆ ಮಾತನಾಡಿದ ಅವರು, ಮದುವೆಯಾಗಲು, ಅಶಕ್ತರಾಗಿರುವ ಬಡವರು ಈ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಬಹುದು. ಧಾರ್ಮಿಕ ದತ್ತಿ ಇಲಾಖೆ ವತಿಯಿಂದ ನಡೆಯಲಿರುವ ಸಪ್ತಪದಿ ಯೋಜನೆಯು ಬಡ ಹಾಗೂ ಮಧ್ಯಮ ವರ್ಗದವರಿಗೆ ವರದಾನ. ಈ ಯೋಜನೆಯನ್ನು ಎಲ್ಲಾ ಬಡವರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಮಾಹಿತಿ ನೀಡಿ, ಏಪ್ರಿಲ್‌ 26 ರಂದು ಕ್ಷೇತ್ರದಲ್ಲಿ ಸಾಮೂಹಿಕ ವಿವಾಹ ನಡೆಯಲಿದ್ದು, ವಧು-ವರರು ಹೆಸರು ನೋಂದಾಯಿಸಿಕೊಳ್ಳಲು ಮಾರ್ಚ್‌ 27 ಕೊನೆಯ ದಿನಾಂಕವಾಗಿದೆ. ಸರಳ ವಿವಾಹದಲ್ಲಿ ವರನಿಗೆ 5 ಸಾವಿರ ರೂಪಾಯಿ ,ವಧುವಿಗೆ 10 ಸಾವಿರ ರೂಪಾಯಿ ನೀಡಲಾಗುವುದು ಎಂದರು.

ಚಿನ್ನದ ತಾಳಿ,ಅಂದಾಜು 8 ಗ್ರಾಂ ತೂಕದ 2 ಚಿನ್ನದ ಗುಂಡು,ಒಟ್ಟು 55 ಸಾವಿರ ರೂ ವೆಚ್ಚವನ್ನು ದೇವಾಲಯದಿಂದ ಭರಿಸಲಾಗುವುದು ಸಾಮೂಹಿಕ ವಿವಾಗವಾಗುವ ವಧುವಿಗೆ ಕಂದಾಯ ಇಲಾಖೆ ವತಿಯಿಂದ ಆದರ್ಶ ವಿವಾಹ ಯೋಜನೆಯಡಿ ನೀಡುವ 10 ಸಾವಿರ ರೂ ನಿಶ್ಚಿತ ಠೇವಣಿ ಸೌಲಭ್ಯ ಒದಗಿಸಲಾಗುತ್ತೆ. ವಧು-ವರರು ಅವರ ಎಲ್ಲಾ ದಾಖಲೆಗಳನ್ನು ನಿಗದಿತ ದಿನಾಂಕದೊಳಗೆ ಘಾಟಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗೆ ಸಲ್ಲಿಸಬೇಕು ಎಂದು ತಿಳಿಸಿದರು.

ವಿವಾಹದ ಸಮಯದಲ್ಲಿ ವಧು-ವರರು ಅವರ ಬಂಧುಗಳಿಗೆ ಹಾಗೂ ಸಾರ್ವಜನಿಕರಿಗೆ ಊಟೋಪಚಾರ,ಹಾಗೂ ಇತರೆ ಆವಶ್ಯಕ ವ್ಯವಸ್ಥೆಗಳನ್ನು ದೇವಸ್ಥಾನದಿಂದ ಮಾಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಚ್‌. ಅಪ್ಪಯ್ಯಣ್ಣ ಮತ್ತಿತರರು ಹಾಜರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next