Advertisement

ಮಂತ್ರಾಲಯದಲ್ಲಿ ಇಂದಿನಿಂದ ಸಪ್ತರಾತ್ರೋತ್ಸವ

11:11 PM Aug 13, 2019 | Lakshmi GovindaRaj |

ರಾಯಚೂರು: ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವ ನಿಮಿತ್ತ ಆ.14ರಿಂದ ಸಪ್ತರಾತ್ರೋತ್ಸವ ಕಾರ್ಯಕ್ರಮಗಳಿಗೆ ಚಾಲನೆ ಸಿಗಲಿದೆ. ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಧ್ವಜಾರೋಹಣ ನೆರವೇರಿಸುವ ಮೂಲಕ ಆರಾಧನೆಗೆ ಚಾಲನೆ ನೀಡುವರು. 14ರಂದು ಅಶ್ವಪೂಜೆ, ಗೋಪೂಜೆ ನಡೆಯಲಿದೆ. 15ರಂದು ಬೆಳಗ್ಗೆ ನೈರ್ಮಲ್ಯ ವಿಸರ್ಜನೆ, ಪಂಚಾಮೃತ ಅಭಿಷೇಕ, ಮುದ್ರಾಧಾರಣೆ, ಮೂಲರಾಮದೇವರ ಪೂಜೆ ನಡೆಯಲಿದೆ.

Advertisement

ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ಶಾಖೋತ್ಸವ ನಡೆಯಲಿದೆ. 16ರಂದು ಗುರು ಸಾರ್ವಭೌಮರ ಪೂರ್ವಾರಾಧನೆ ಜರುಗಲಿದ್ದು, ತಿರುಮಲ ತಿರುಪತಿ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ಮೆರವಣಿಗೆ ಮೂಲಕ ತಂದು ರಾಯರ ಬೃಂದಾವನಕ್ಕೆ ಸಮರ್ಪಿಸಲಾಗುವುದು. ಪಂಚಾಮೃತ ಮಹಾಭಿಷೇಕ, ರಾಘವೇಂದ್ರ ಅನುಗ್ರಹ ಪ್ರಶಸ್ತಿ ಪ್ರದಾನ ಹಾಗೂ ವಿವಿಧ ಕ್ಷೇತ್ರಗಳ ಪ್ರಮುಖರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

17ರಂದು ಮಧ್ಯಾರಾಧನೆ ನಡೆಯಲಿದ್ದು, ಮೂಲ ಬೃಂದಾವನಕ್ಕೆ ವಿಶೇಷ ಪಂಚಾಮೃತ ಅಭಿಷೇಕ, ಮೂಲ ರಾಮದೇವರ ಪೂಜೆ, ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. 18ರಂದು ಮಹಾರಥೋತ್ಸವ ನಡೆಯಲಿದೆ. ಸಂಸ್ಕೃತ ಪಾಠಶಾಲೆಯಿಂದ ಪುರ ಬೀದಿಗಳಲ್ಲಿ ಉತ್ಸವ ನಡೆಯಲಿದ್ದು, ಹೆಲಿಕಾಪ್ಟರ್‌ ಮೂಲಕ ಪುಷ್ಪವೃಷ್ಟಿ ಮಾಡಲಾಗುತ್ತದೆ. ನಂತರ ವಸಂತೋತ್ಸವ ಕಾರ್ಯಕ್ರಮ ನಡೆಯುತ್ತದೆ. 19ರಂದು ಸುಜ್ಞಾನೇಂದ್ರ ತೀರ್ಥರ ಆರಾಧನೆ ನಡೆಯಲಿದೆ. 20ಕ್ಕೆ ಸಪ್ತ ರಾತ್ರೋತ್ಸವದ ಸಮಾರೋಪ ಸಮಾರಂಭ ನಡೆಯಲಿದೆ.

Advertisement

Udayavani is now on Telegram. Click here to join our channel and stay updated with the latest news.

Next