Advertisement

ಹುಬ್ಬಳ್ಳಿ ಹೋಟೆಲ್ ನಲ್ಲಿ ‘ಸರಳ ವಾಸ್ತು’ ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ!

01:55 PM Jul 05, 2022 | Team Udayavani |

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ಹಾಡಹಗಲೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

Advertisement

ಇಲ್ಲಿನ ಉಣಕಲ್ಲ ಕೆರೆ ಬಳಿಯ ಖಾಸಗಿ ಹೋಟೆಲ್ ನ ಸ್ವಾಗತಕಾರರ ಕೌಂಟರ್ ಬಳಿ ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಗುರೂಜಿ ಮೇಲೆ ಏಕಾಏಕಿ ದಾಳಿ ನಡೆಸಿ ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಚಂದ್ರಶೇಖರ್ ಗುರೂಜಿ ಮೃತದೇಹವನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ:ಅಸ್ವಸ್ಥಗೊಂಡಿದ್ದ ಮಗು ಸಾವು: ವೈದ್ಯರ ನಿರ್ಲಕ್ಷ್ಯ ಖಂಡಿಸಿ ಪೋಷಕರ ಆಕ್ರೋಶ

ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಮಾತನಾಡಿಸಿದವರಂತೆ ಮಾಡಿ ಏಕಾಏಕಿ ಚಾಕುವಿನಿಂದ ದಾಳಿ ಮಾಡಿ ಹತ್ಯೆಗೈದು ಪರಾರಿಯಾಗಿದ್ದು, ಈ ದೃಶ್ಯಗಳು ಸಿಸಿಟಿವಿಯಲ್ಲಿ ದೊರೆತಿದ್ದು, ಅವರ ಪತ್ತೆಗೆ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Advertisement

ಘಟನಾ ಸ್ಥಳಕ್ಕೆ ಡಿಸಿಪಿ ಸಾಹಿಲ ಬಾಗ್ಲಾ, ಗೋಪಾಲ ಬ್ಯಾಕೋಡ ಆಗಮಿಸಿ ಪರಿಶೀಲಿಸುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next