Advertisement

ಸರಸ್ವತಿಪುರಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿಯ ಬಂಧನ

01:07 PM Sep 16, 2020 | Mithun PG |

ಮೈಸೂರು:  ಸರಸ್ವತಿಪುರಂ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ದರೋಡೆಗೆ ಹೊಂಚು ಹಾಕುತ್ತಿದ್ದ 8 ಮಂದಿಯನ್ನು ಬಂಧಿಸಿದ್ದಾರೆ.

Advertisement

ಬಂಧಿತರನ್ನು ಶರತ್, ಸುಮಂತ್, ಧರ್ಮೇಶ್, ಶಶಾಂಕ್, ದಿನೇಶ್.ಸುನೀಲ್ ಕುಮಾರ್,‌ ಕಾರ್ತಿಕ್, ಮಹದೇವ್‌‌  ಎಂದು ಗುರುತಿಸಲಾಗಿದೆ. ಇವರಿಂದ ಕೃತ್ಯಕ್ಕೆ ಬಳಸಲಾಗುತ್ತಿದ್ದ 1 ಮಾರುತಿ ವ್ಯಾನ್, 4 ಬೈಕ್, 11 ಮೊಬೈಲ್, 6ಸಾವಿರ ನಗದು ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣ ಸಂಬಂಧ‌ 5 ಇತರೆ ಠಾಣೆಯ ಪ್ರಕರಣವನ್ನೂ ಪೊಲೀಸರು ಬೇಧಿಸಿದ್ದಾರೆ.  ಸಂಚು ಮಾಡುತ್ತಿದ್ದ ವೇಳೆ‌ ಲಾಂಗ್, ಹಾಕಿ ಸ್ಟಿಕ್, 5 ಪ್ಯಾಕೆಟ್ ಖಾರದಪುಡಿ, ಎರಡು ಡ್ರ್ಯಾಗರ್, ಮಂಕಿ ಕ್ಯಾಪ್, ವಿಕೆಟ್‌ಗಳು ಕೂಡ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ಬಂಧಿತರಿಂದ ಹಲವು ಪ್ರಕರಣಗಳ ಮಾಹಿತಿ ಬೆಳಕಿಗೆ ಬಂದಿದೆ. ಆರೋಪಿಗಳು ದರೋಡೆಯನ್ನೇ ವೃತ್ತಿಯಾಗಿ ಮಾಡಿಕೊಂಡಿದ್ದು, ಇವರ ಗುಂಪಿನಲ್ಲಿ 30 ಜನರು ಇರುವುದು ತಿಳಿದು ಬಂದಿದೆ. ಈಗ ಏಂಟು ಜನ ಸೆರೆ ಸಿಕ್ಕಿದ್ದಾರೆ. ಉಳಿದವರನ್ನು ಸದ್ಯದಲ್ಲೆ ಬಂಧಿಸಲಾಗುವುದು. ಬಂಧಿತರಿಂದ ಕೇಸ್ ದಾಖಲಾಗದ ಪ್ರಕರಣಗಳ ಬಗ್ಗೆಯೂ ಮಾಹಿತಿ ಸಿಕ್ಕಿದೆ. ಇವರಿಂದ ಮುಂದೆ ಆಗಬೇಕಿದ್ದ ಅನಾಹುತಗಳು ತಪ್ಪಿವೆ ಎಂದು ಮೈಸೂರಿನಲ್ಲಿ ಡಿಸಿಪಿ ಪ್ರಕಾಶ್ ಗೌಡ ಹೇಳಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next