Advertisement

ಎಫ್ಐಆರ್‌ ರದ್ದು ಕೋರಿ ಸರ್ಜಾ ಹೈಕೋರ್ಟ್‌ ಮೊರೆ

06:00 AM Oct 31, 2018 | Team Udayavani |

ಬೆಂಗಳೂರು: ತಮ್ಮ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಸಂಬಂಧ ನಟಿ ಶೃತಿ ಹರಿಹರನ್‌ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಅರ್ಜುನ್‌ ಸರ್ಜಾ ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಇದೇ ವೇಳೆ ಪ್ರಕರಣ ಇತ್ಯರ್ಥವಾಗುವವರೆಗೂ ದೂರಿಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗಳಿಗೆ ತಡೆಯಾಜ್ಞೆ ನೀಡಬೇಕು ಎಂದು ಸರ್ಜಾ ಮನವಿ ಮಾಡಿದ್ದಾರೆ.

Advertisement

“ವಿಸ್ಮಯ’ ಸಿನಿಮಾ ಚಿತ್ರೀಕರಣದ ವೇಳೆ ತಾವು ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ಶೃತಿ ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿ ಆರೋಪಿಸಿದ್ದಾರೆ. ಆದರೆ, ಸಿನಿಮಾ ಶೂಟಿಂಗ್‌ ಅಥವಾ ಬಳಿಕ ಆ ರೀತಿ ನಡೆದುಕೊಂಡಿಲ್ಲ. ಮೂರು ವರ್ಷಗಳ ಬಳಿಕ ಶೃತಿ ಸುಳ್ಳು ಆರೋಪ ಮಾಡುತ್ತಿದ್ದಾರೆ. ದುರುದ್ದೇಶಪೂರ್ವಕವಾಗಿ ದೂರು ದಾಖಲಿಸಿದ್ದಾರೆ. ಹೀಗಾಗಿ ಪ್ರಕರಣ ರದ್ದು
ಪಡಿಸುವಂತೆ ಅರ್ಜಿಯಲ್ಲಿ ಅರ್ಜುನ್‌ ಸರ್ಜಾ ಮನವಿ ಮಾಡಿದ್ದಾರೆ.

ಶೃತಿ ಆರೋಪದಿಂದ ತಮಗೆ ಹಾಗೂ ಕುಟುಂಬ ಸದಸ್ಯರಿಗೆ ತೀವ್ರ ಮುಜುಗರ, ಮಾನಹಾನಿ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಅ.25ರಂದು ಶೃತಿ ಹರಿಹರನ್‌ ವಿರುದ್ಧ ಸೈಬರ್‌ ಕ್ರೈಂ ಪೊಲೀಸರಿಗೆ ದೂರು ದಾಖಲಿಸಲಾಗಿದೆ. 5 ಕೋಟಿ ಪರಿಹಾರ ಕೇಳಿ 
ಮಾನನಷ್ಟ ಮೊಕದ್ದಮೆ ಕೂಡ ಹೂಡಲಾಗಿದೆ. ಇದರ ಬೆನ್ನಲ್ಲೇ ಶೃತಿ ಅವರು ತಮ್ಮ ವಿರುದ್ಧ ಉದ್ದೇಶಪೂರ್ವಕವಾಗಿ ಅ.27ರಂದು ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಅರ್ಜುನ್‌ ಸರ್ಜಾ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next