Advertisement

ಸರ್ವಜ್ಞ ವಿಚಾರಧಾರೆ ಮೈಗೂಡಿಸಿಕೊಳ್ಳಿ

12:12 PM Feb 21, 2021 | Team Udayavani |

ದೇವನಹಳ್ಳಿ: ಸಂತ ಕವಿ ಸರ್ವಜ್ಞ ವಿಚಾರಧಾರೆ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಶಿರಸ್ತೇದಾರ್‌ ನಾಗೇಶ್‌ ತಿಳಿಸಿದರು.

Advertisement

ನಗರದ ಮಿನಿವಿಧಾನಸೌಧದ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿ ತಾಂಡವಾಡುತ್ತಿದ್ದ ಮೂಢನಂಬಿಕೆ, ಜಾತಿ ಪದ್ಧತಿ, ಅಸಮಾನತೆ, ಆಚಾರ ವಿಚಾರ ಸೇರಿದಂತೆ ಹಲವಾರು ವಿಚಾರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಪ್ರತಿನಿತ್ಯ ಜನರು ಬಳಸುವ ಆಡು ಬಾಷೆಯಲ್ಲಿ ಮೂರು ಸಾಲಿನ ತ್ರಿಪದಿ ಮೂಲಕ ತಿಳಿಸಿಕೊಟ್ಟಿರುವುದು ಇವರ ವೈಚಾರಿಕ ಸಿದ್ಧಾಂತ ಎಂದರು.

ತ್ರಿಪದಿ ಮೂಲಕ ಸಮಾಜದ ಅಂಕು ಡೊಂಕುಗಳ ಬಗ್ಗೆ ತಿಳಿಸಿಕೊಟ್ಟರು. ಮಹಾನೀಯರ ಆದರ್ಶ ವಿಚಾರಧಾರೆ ಮುಂದಿನ ಪೀಳಿಗೆಗೂ ಪರಿಚಯ ಮಾಡಿಸಿದಾಗ ಮಾತ್ರ ಜಯಂತಿಗೆ ನಿಜವಾದ ಅರ್ಥ ಬರುತ್ತದೆ. ಮಹಾನೀಯರು ಹಾಕಿಕೊಟ್ಟಂತಹ ದಾರಿಯಲ್ಲಿ ನಡೆಯುವಂತಾಗಬೇಕು ಎಂದರು.

ಶಿರಸ್ತೇದಾರ್‌ ಭರತ್‌ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next