Advertisement

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯಕ್ಕೆ ಆಗಮನ: ಕಾಂಗ್ರೆಸ್‌ನಿಂದ ಸರ್ವೋದಯ ಸಮಾವೇಶ

04:52 PM Nov 02, 2022 | Team Udayavani |

ಬೆಂಗಳೂರು: ಎಐಸಿಸಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಕ್ಕೆ ಮೊದಲ ಬಾರಿಗೆ ಇದೇ 6 ರಂದು ಆಗಮಿಸುತ್ತಿದ್ದು, ಅವರನ್ನು ಅಭಿನಂದಿಸಲು ಬೆಂಗಳೂರಿನ ಅರಮನೆ ಮೈದಾನದಲ್ಲಿ ಸರ್ವೋದಯ ಸಮಾವೇಶ ಆಯೋಜಿಸಲಾಗಿದೆ.

Advertisement

ಮಧ್ಯಾಹ್ನ 2.35ಕ್ಕೆ ಅರಮನೆ ಮೈದಾನದಲ್ಲಿ ‘ಸರ್ವೋದಯ ಸಮಾವೇಶ’ ಹಮ್ಮಿಕೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಾವಿರಾರು ಮಂದಿ ಕಾರ್ಯಕರ್ತರು, ನಾಯಕರು ಸ್ವಾಗತ ಮಾಡಲಿದ್ದಾರೆ.

ರಾಜ್ಯದ ವಿವಿಧ ಮೂಲೆಯಿಂದ ಜನ ಆಗಮಿಸುವ ಹಿನ್ನೆಲೆಯಲ್ಲಿ ಕಾರ್ಯಕ್ರಮವನ್ನು ಮಧ್ಯಾಹ್ನ ಹಮ್ಮಿಕೊಂಡಿದ್ದೇವೆ. ರಾಜ್ಯದ ಎಲ್ಲ ನಾಯಕರು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಆಗಮಿಸಲಿದ್ದಾರೆ. ಅವರು ಎರಡು ದಿನ ಮುಂಚಿತವಾಗಿ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ನಾಯಕರ ಜತೆ ಒಂದು ವಾರ ಸಭೆ ನಡೆಸಲಿದ್ದಾರೆ.

ಖರ್ಗೆ ಅವರು 1972ರಲ್ಲಿ ವಿಧಾನಸಭೆಗೆ ಪ್ರವೇಶಿಸಿದ್ದು, 50 ವರ್ಷಗಳ ಸುದೀರ್ಘ ಸೇವೆ ಮಾಡಿದ್ದು, ಇಂತಹ ಹಿರಿಯ ನಾಯಕರು ನಮ್ಮ ರಾಜ್ಯದಿಂದ ಈ ಸ್ಥಾನಕ್ಕೆ ಆಯ್ಕೆ ಆಗಿರುವುದು ನಮ್ಮ ಹೆಮ್ಮೆ. ಹೀಗಾಗಿ ಅವರನ್ನು ಅದ್ಧೂರಿಯಾಗಿ ಸ್ವಾಗತಿಸಲು ಮುಂದಾಗಿದ್ದೇವೆ. ಪಕ್ಷ ಮಾತ್ರವಲ್ಲದೆ ಹಲವು ಸಂಘಟನೆಗಳು ಕೂಡ ಸ್ವಾಗತ ಕಾರ್ಯಕ್ರಮಕ್ಕೆ ಬೆಂಬಲ ನೀಡಿದ್ದಾರೆ.

ಈ ಸರ್ವೋದಯ ಸಮಾವೇಶಕ್ಕೆ ಪ್ರತಿ ಗ್ರಾಮ ಪಂಚಾಯ್ತಿಯಿಂದ, ವಾರ್ಡ್ ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಆಗಮಿಸಬೇಕು. ಯುವ ಕಾಂಗ್ರೆಸ್, ಮಹಿಳಾ ಕಾಂಗ್ರೆಸ್, ಕಿಸಾನ್ ಘಟಕ, ಅಲ್ಪ ಸಂಖ್ಯಾತರು, ಹಿಂದುಳಿದ ವರ್ಗದವರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಘಟಕ ಸೇರಿದಂತೆ ನಾನಾ ಘಟಕಗಳ ಮುಖಂಡರು ಈ ಕಾರ್ಯಕ್ರಮಕ್ಕೆ ಆಗಮಿಸುವಂತೆ ಕೆಪಿಸಿಸಿ ಮನವಿ ಮಾಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next